<p><strong>ಶಿವಮೊಗ್ಗ</strong>: ಅರಸಾಳು ರೈಲುನಿಲ್ದಾಣವನ್ನು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿ ರೂಪಿಸಲಾಗಿದೆ.28ಬೋಗಿಗಳರೈಲು ನಿಲ್ಲುವ ಸೌಲಭ್ಯ ಕಲ್ಪಿಸಲಾಗಿದೆ ಎಂದುರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು.</p>.<p>ಶಿವಮೊಗ್ಗ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿವರ್ಚುವಲ್ವೀಡಿಯೊಮೂಲಕ ನಗರದ ಮುಖ್ಯ ರೈಲುನಿಲ್ದಾಣದ ಲಿಫ್ಟ್ಹಾಗೂ ನವೀಕೃತ ಅರಸಾಳುನಿಲ್ದಾಣ, ವಿಸ್ತರಣೆಯಾದ ಪ್ಲಾಟ್ಫಾರಂ,ಮ್ಯೂಸಿಯಂ ಮಾಲ್ಗುಡಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲುಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಸ್ವಾಧೀನಕ್ಕೆ ₹ 245 ಕೋಟಿ ವೆಚ್ಚವಾಗಲಿದೆ.ಇನ್ನೆರಡು ತಿಂಗಳಲ್ಲಿ ಭೂಸ್ವಾಧೀನ ಪೂರ್ಣಗೊಳ್ಳಲಿದೆ. ₹ 994 ಕೋಟಿ ವೆಚ್ಚದಲ್ಲಿ ಹೊಸ ರೈಲು ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಉಚಿತವಾಗಿ ಭೂಮಿ ಒದಗಿಸುತ್ತಿದ್ದಾರೆ. ರಾಜ್ಯ ಸರ್ಕಾರದಿಂದಶೇ 50ರಷ್ಟು ಯೋಜನಾ ವೆಚ್ಚ ಭರಿಸುವ ಭರವಸೆ ನೀಡಿದ್ದಾರೆ. ಅದೇ ರೀತಿ ದಾವಣಗೆರೆ-ಬೆಂಗಳೂರುಮಧ್ಯೆದ್ವಿಪಥ ಮಾರ್ಗನಿರ್ಮಾಣಕ್ಕೂ ಜಮೀನು ಒದಗಿಸಲಾಗುತ್ತಿದೆ.ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಸಂಸದಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗ ರೈಲುನಿಲ್ದಾಣದಲ್ಲಿ ₹ 1 ಕೋಟಿ ವೆಚ್ಚದಲ್ಲಿ ಎರಡು ಲಿಫ್ಟ್ಗಳನ್ನು ನಿರ್ಮಿಸಲಾಗಿದೆ. ಇದರಿಂದಹಿರಿಯ ನಾಗರಿಕರಿಗೆ, ಅಂಗವಿಕಲ, ಅಶಕ್ತಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದರು.</p>.<p>ಶಿವಮೊಗ್ಗ-ಹರಿಹರ ರೈಲು ಮಾರ್ಗ, ಬೀರೂರು-ಶಿವಮೊಗ್ಗದ್ವಿಪಥ ಮಾರ್ಗ, ತಾಳಗುಪ್ಪ-ಸಿದ್ದಾಪುರ ಹಾಗೂ ಶಿವಮೊಗ್ಗದಿಂದ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬೇಕಿದೆ. ಹಲವುವರ್ಷಗಳಿಂದ ನನೆಗುದಿಗೆ ಬಿದ್ದಿರುವಶಿವಮೊಗ್ಗದ ನೂರು ಅಡಿ ವರ್ತುಲ ರಸ್ತೆಯೂಎರಡುತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.</p>.<p>ನಾಲ್ಕು ರೈಲುಸೇತುವೆ ನಿರ್ಮಾಣ: ₹ 100 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ವಿದ್ಯಾನಗರ, ಭದ್ರಾವತಿಯ ಜೆಡಿ ಕಟ್ಟೆ, ಕಾಶಿಪುರ ಮತ್ತು ಸವಳಂಗ ರಸ್ತೆಯಲ್ಲಿ ರೈಲು ಮೇಲು ಸೇತುವೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರೆತಿದೆ.ಕಾಮಗಾರಿ ಆದಷ್ಟು ಬೇಗನೆ ಆರಂಭವಾಗಲಿದೆ ಎಂದುವಿವರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಅರಸಾಳು ರೈಲುನಿಲ್ದಾಣವನ್ನು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿ ರೂಪಿಸಲಾಗಿದೆ.28ಬೋಗಿಗಳರೈಲು ನಿಲ್ಲುವ ಸೌಲಭ್ಯ ಕಲ್ಪಿಸಲಾಗಿದೆ ಎಂದುರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು.</p>.<p>ಶಿವಮೊಗ್ಗ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿವರ್ಚುವಲ್ವೀಡಿಯೊಮೂಲಕ ನಗರದ ಮುಖ್ಯ ರೈಲುನಿಲ್ದಾಣದ ಲಿಫ್ಟ್ಹಾಗೂ ನವೀಕೃತ ಅರಸಾಳುನಿಲ್ದಾಣ, ವಿಸ್ತರಣೆಯಾದ ಪ್ಲಾಟ್ಫಾರಂ,ಮ್ಯೂಸಿಯಂ ಮಾಲ್ಗುಡಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲುಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಸ್ವಾಧೀನಕ್ಕೆ ₹ 245 ಕೋಟಿ ವೆಚ್ಚವಾಗಲಿದೆ.ಇನ್ನೆರಡು ತಿಂಗಳಲ್ಲಿ ಭೂಸ್ವಾಧೀನ ಪೂರ್ಣಗೊಳ್ಳಲಿದೆ. ₹ 994 ಕೋಟಿ ವೆಚ್ಚದಲ್ಲಿ ಹೊಸ ರೈಲು ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಉಚಿತವಾಗಿ ಭೂಮಿ ಒದಗಿಸುತ್ತಿದ್ದಾರೆ. ರಾಜ್ಯ ಸರ್ಕಾರದಿಂದಶೇ 50ರಷ್ಟು ಯೋಜನಾ ವೆಚ್ಚ ಭರಿಸುವ ಭರವಸೆ ನೀಡಿದ್ದಾರೆ. ಅದೇ ರೀತಿ ದಾವಣಗೆರೆ-ಬೆಂಗಳೂರುಮಧ್ಯೆದ್ವಿಪಥ ಮಾರ್ಗನಿರ್ಮಾಣಕ್ಕೂ ಜಮೀನು ಒದಗಿಸಲಾಗುತ್ತಿದೆ.ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಸಂಸದಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗ ರೈಲುನಿಲ್ದಾಣದಲ್ಲಿ ₹ 1 ಕೋಟಿ ವೆಚ್ಚದಲ್ಲಿ ಎರಡು ಲಿಫ್ಟ್ಗಳನ್ನು ನಿರ್ಮಿಸಲಾಗಿದೆ. ಇದರಿಂದಹಿರಿಯ ನಾಗರಿಕರಿಗೆ, ಅಂಗವಿಕಲ, ಅಶಕ್ತಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದರು.</p>.<p>ಶಿವಮೊಗ್ಗ-ಹರಿಹರ ರೈಲು ಮಾರ್ಗ, ಬೀರೂರು-ಶಿವಮೊಗ್ಗದ್ವಿಪಥ ಮಾರ್ಗ, ತಾಳಗುಪ್ಪ-ಸಿದ್ದಾಪುರ ಹಾಗೂ ಶಿವಮೊಗ್ಗದಿಂದ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬೇಕಿದೆ. ಹಲವುವರ್ಷಗಳಿಂದ ನನೆಗುದಿಗೆ ಬಿದ್ದಿರುವಶಿವಮೊಗ್ಗದ ನೂರು ಅಡಿ ವರ್ತುಲ ರಸ್ತೆಯೂಎರಡುತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.</p>.<p>ನಾಲ್ಕು ರೈಲುಸೇತುವೆ ನಿರ್ಮಾಣ: ₹ 100 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ವಿದ್ಯಾನಗರ, ಭದ್ರಾವತಿಯ ಜೆಡಿ ಕಟ್ಟೆ, ಕಾಶಿಪುರ ಮತ್ತು ಸವಳಂಗ ರಸ್ತೆಯಲ್ಲಿ ರೈಲು ಮೇಲು ಸೇತುವೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರೆತಿದೆ.ಕಾಮಗಾರಿ ಆದಷ್ಟು ಬೇಗನೆ ಆರಂಭವಾಗಲಿದೆ ಎಂದುವಿವರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>