<p><strong>ತೀರ್ಥಹಳ್ಳಿ</strong>: ‘ಜಲ ಜೀವನ್ ಮಿಷನ್’ ಕಾಮಗಾರಿ ನಿರ್ವಹಣೆಯಲ್ಲಿ ಬೇಜವಾಬ್ದಾರಿ ಮತ್ತು ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಎಂಜಿನಿಯರ್ ಕೆ.ಮುರುಗೇಶ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಸರ್ಕಾರೀ ಹಣದ ದುರುಪಯೋಗ ಮಾಡಿಕೊಂಡಿರುವ ಆರೋಪದ ಮೇಲೆ ನ. 2ರಂದು ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎನ್.ಡಿ.ಪ್ರಕಾಶ ಆದೇಶ ಹೊರಡಿಸಿದ್ದಾರೆ.</p>.<p>ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಗಲವಳ್ಳಿ ಗ್ರಾಮದಲ್ಲಿ ‘ಜಲಜೀವನ್ ಮಿಷನ್’ ಕಾಮಗಾರಿಯ ಎಫ್ಎಚ್ಟಿಸಿ ಅಳವಡಿಸಿದ್ದು, ನಲ್ಲಿಗಳಿಗೆ ನೀರು ಸಂಪರ್ಕ ಕಲ್ಪಿಸಿಲ್ಲ. ಕೆಲವು ಮನೆಗಳಿಗೆ ಮುಖ್ಯ ನೀರು ಸರಬರಾಜು ಪೈಪ್ಲೈನ್ನಿಂದ ಎಫ್ಎಚ್ಟಿಸಿವರೆಗೆ ಪೈಪ್ಲೈನ್ ಮಾಡದೇ ಅಪೂರ್ಣಗೊಳಿಸಿದ್ದಾರೆ. 8 ತಿಂಗಳ ಹಿಂದಿನ ಕಾಮಗಾರಿ ಇದಾಗಿದ್ದು, ಮಾಹಿತಿ ನೀಡಲು ಮುರುಗೇಶ್ ವಿಫಲರಾಗಿದ್ದಾರೆ. ಆದ್ದರಿಂದ ತಕ್ಷಣ ಜಾರಿಗೆ ಬರುವಂತೆ ಕರ್ನಾಟಕ ನಾಗರಿಕ ಸೇವಾ ನಿಯಮದ ಅಡಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ</strong>: ‘ಜಲ ಜೀವನ್ ಮಿಷನ್’ ಕಾಮಗಾರಿ ನಿರ್ವಹಣೆಯಲ್ಲಿ ಬೇಜವಾಬ್ದಾರಿ ಮತ್ತು ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಎಂಜಿನಿಯರ್ ಕೆ.ಮುರುಗೇಶ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಸರ್ಕಾರೀ ಹಣದ ದುರುಪಯೋಗ ಮಾಡಿಕೊಂಡಿರುವ ಆರೋಪದ ಮೇಲೆ ನ. 2ರಂದು ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎನ್.ಡಿ.ಪ್ರಕಾಶ ಆದೇಶ ಹೊರಡಿಸಿದ್ದಾರೆ.</p>.<p>ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಗಲವಳ್ಳಿ ಗ್ರಾಮದಲ್ಲಿ ‘ಜಲಜೀವನ್ ಮಿಷನ್’ ಕಾಮಗಾರಿಯ ಎಫ್ಎಚ್ಟಿಸಿ ಅಳವಡಿಸಿದ್ದು, ನಲ್ಲಿಗಳಿಗೆ ನೀರು ಸಂಪರ್ಕ ಕಲ್ಪಿಸಿಲ್ಲ. ಕೆಲವು ಮನೆಗಳಿಗೆ ಮುಖ್ಯ ನೀರು ಸರಬರಾಜು ಪೈಪ್ಲೈನ್ನಿಂದ ಎಫ್ಎಚ್ಟಿಸಿವರೆಗೆ ಪೈಪ್ಲೈನ್ ಮಾಡದೇ ಅಪೂರ್ಣಗೊಳಿಸಿದ್ದಾರೆ. 8 ತಿಂಗಳ ಹಿಂದಿನ ಕಾಮಗಾರಿ ಇದಾಗಿದ್ದು, ಮಾಹಿತಿ ನೀಡಲು ಮುರುಗೇಶ್ ವಿಫಲರಾಗಿದ್ದಾರೆ. ಆದ್ದರಿಂದ ತಕ್ಷಣ ಜಾರಿಗೆ ಬರುವಂತೆ ಕರ್ನಾಟಕ ನಾಗರಿಕ ಸೇವಾ ನಿಯಮದ ಅಡಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>