<p><strong>ರಿಪ್ಪನ್ಪೇಟೆ</strong>: ಇಲ್ಲಿನ ಗವಟೂರು ಗ್ರಾಮದ ಕೂಲಿ ಕಾರ್ಮಿಕರೊಬ್ಬರು ಮಂಗಳವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.<br><br>ದೊಡ್ಡಿನಕೊಪ್ಪದ ಮಂಜುನಾಥ್ (37) ಸಾವಿಗೀಡಾದವರು. ಮಧ್ಯಾಹ್ನ ಮನೆಗೆ ದೂರವಾಣಿ ಕರೆ ಮಾಡಿದ್ದ ಇವರು ಗವಟೂರಿನ ಜಗದೀಶ ಅವರ ತೋಟದಲ್ಲಿ ಅಡಿಕೆ ಗೊನೆ ಹೊರುವ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದರು. ಕೆಲಸ ಮುಗಿಸಿ ಬೇಗ ಬರುವುದಾಗಿಯೂ ತಿಳಿಸಿದ್ದರು. </p>.<p>ಆದರೆ, ಸಂಜೆ 4 ರ ಹೊತ್ತಿಗೆ ಜಗದೀಶ್ ಹಾಗೂ ಅವರ ಪುತ್ರ ಕಾರಿನಲ್ಲಿ ಮಂಜುನಾಥ್ ಅವರ ಮೃತದೇಹ ತಂದು, ಅಪರಿಚಿತ ವ್ಯಕ್ತಿ ಮಾರ್ಗ ಮಧ್ಯೆ ಬಿದ್ದಿದ್ದ ಎಂದು ಹೇಳಿ ಸರ್ಕಾರಿ ಆಸ್ಪತ್ರೆಯಲ್ಲಿ ಇಟ್ಟು ಹೋಗಿದ್ದಾರೆ ಎನ್ನಲಾಗಿದೆ. ಈ ಕುರಿತು ಕುಟುಂಬಸ್ಥರಿಗೂ ಮಾಹಿತಿ ನೀಡಿಲ್ಲ.</p>.<p>ಸಾವಿನ ವಿಷಯ ತಿಳಿದ ಕುಟುಂಬಸ್ಥರು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪಿಎಸ್ಐ ರಾಜು ರೆಡ್ಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಅಂಗವಾಗಿ ಜಗದೀಶ್ ಅವರನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ</strong>: ಇಲ್ಲಿನ ಗವಟೂರು ಗ್ರಾಮದ ಕೂಲಿ ಕಾರ್ಮಿಕರೊಬ್ಬರು ಮಂಗಳವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.<br><br>ದೊಡ್ಡಿನಕೊಪ್ಪದ ಮಂಜುನಾಥ್ (37) ಸಾವಿಗೀಡಾದವರು. ಮಧ್ಯಾಹ್ನ ಮನೆಗೆ ದೂರವಾಣಿ ಕರೆ ಮಾಡಿದ್ದ ಇವರು ಗವಟೂರಿನ ಜಗದೀಶ ಅವರ ತೋಟದಲ್ಲಿ ಅಡಿಕೆ ಗೊನೆ ಹೊರುವ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದರು. ಕೆಲಸ ಮುಗಿಸಿ ಬೇಗ ಬರುವುದಾಗಿಯೂ ತಿಳಿಸಿದ್ದರು. </p>.<p>ಆದರೆ, ಸಂಜೆ 4 ರ ಹೊತ್ತಿಗೆ ಜಗದೀಶ್ ಹಾಗೂ ಅವರ ಪುತ್ರ ಕಾರಿನಲ್ಲಿ ಮಂಜುನಾಥ್ ಅವರ ಮೃತದೇಹ ತಂದು, ಅಪರಿಚಿತ ವ್ಯಕ್ತಿ ಮಾರ್ಗ ಮಧ್ಯೆ ಬಿದ್ದಿದ್ದ ಎಂದು ಹೇಳಿ ಸರ್ಕಾರಿ ಆಸ್ಪತ್ರೆಯಲ್ಲಿ ಇಟ್ಟು ಹೋಗಿದ್ದಾರೆ ಎನ್ನಲಾಗಿದೆ. ಈ ಕುರಿತು ಕುಟುಂಬಸ್ಥರಿಗೂ ಮಾಹಿತಿ ನೀಡಿಲ್ಲ.</p>.<p>ಸಾವಿನ ವಿಷಯ ತಿಳಿದ ಕುಟುಂಬಸ್ಥರು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪಿಎಸ್ಐ ರಾಜು ರೆಡ್ಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಅಂಗವಾಗಿ ಜಗದೀಶ್ ಅವರನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>