<p><strong>ಸಾಗರ</strong>: ತಾಲ್ಲೂಕಿನ ಶರಾವತಿ ಹಿನ್ನೀರ ಪ್ರದೇಶದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟ ಸಿದ್ದಯ್ಯ ಅವರ ಅಸಹಜ ಸಾವಿನ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ಪ್ರಮುಖರು ಶನಿವಾರ ಡಿವೈಎಸ್ಪಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.</p>.<p>‘ಕಳೆದ ಮೇ 16ರಂದು ಕೋಳೂರು ಗ್ರಾಮದ ಸಿದ್ದಯ್ಯ ಅವರ ಶವ ಮರಡವಳ್ಳಿ ಗ್ರಾಮದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಪತ್ತೆಯಾಗಿದೆ. ಅವರ ದೇಹದ ಮೇಲೆ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>‘ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಅಕ್ರಮ ಗೋ ಸಾಗಾಣಿಕೆ ಕೃತ್ಯ ನಡೆಯುತ್ತಿದೆ. ಇವುಗಳನ್ನು ಗುರುತಿಸಿದ ಕಾರಣಕ್ಕೆ ಸಿದ್ದಯ್ಯ ಅವರ ಸಾವು ಸಂಭವಿಸಿರುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಆಯಾಮಗಳಿಂದಲೂ ಪ್ರಕರಣದ ತನಿಖೆ ಮಾಡಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.</p>.<p>‘ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರಿಂದ ದೂರುಗಳಿವೆ. ಸಿದ್ದಯ್ಯ ಅವರ ಸಾವಿನ ಪ್ರಕರಣವನ್ನು ಭೇದಿಸುವ ಮೂಲಕ ಈ ಅಕ್ರಮ ಚಟುವಟಿಕೆಗಳಿಗೂ ತಡೆ ಹಾಕಬಹುದು’ ಎಂದು ಮನವಿಯಲ್ಲಿ ಹೇಳಿದ್ದಾರೆ.</p>.<p>ವೀರಶೈವ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಕೆ.ವಿ.ಪ್ರವೀಣ್, ಪ್ರಮುಖರಾದ ಎ.ಎಸ್.ಪಾಟೀಲ್, ವೃಂದಾ ಜಗದೀಶ್, ಗಿರೀಶ್ ಗುಳೆಹಳ್ಳಿ, ಗುರು ಕಾಗೋಡು, ನಂದೀಶ್ ಸಿರಿವಂತೆ, ಅರುಣ್ ರಾಜ್, ತೇಜಸ್ವಿ ಎಂ.ಆರ್, ವ.ಶಂ.ರಾಮಚಂದ್ರ ಭಟ್, ಸುಭಾಷ್ ಕೌತಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ತಾಲ್ಲೂಕಿನ ಶರಾವತಿ ಹಿನ್ನೀರ ಪ್ರದೇಶದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟ ಸಿದ್ದಯ್ಯ ಅವರ ಅಸಹಜ ಸಾವಿನ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ಪ್ರಮುಖರು ಶನಿವಾರ ಡಿವೈಎಸ್ಪಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.</p>.<p>‘ಕಳೆದ ಮೇ 16ರಂದು ಕೋಳೂರು ಗ್ರಾಮದ ಸಿದ್ದಯ್ಯ ಅವರ ಶವ ಮರಡವಳ್ಳಿ ಗ್ರಾಮದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಪತ್ತೆಯಾಗಿದೆ. ಅವರ ದೇಹದ ಮೇಲೆ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>‘ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಅಕ್ರಮ ಗೋ ಸಾಗಾಣಿಕೆ ಕೃತ್ಯ ನಡೆಯುತ್ತಿದೆ. ಇವುಗಳನ್ನು ಗುರುತಿಸಿದ ಕಾರಣಕ್ಕೆ ಸಿದ್ದಯ್ಯ ಅವರ ಸಾವು ಸಂಭವಿಸಿರುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಆಯಾಮಗಳಿಂದಲೂ ಪ್ರಕರಣದ ತನಿಖೆ ಮಾಡಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.</p>.<p>‘ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರಿಂದ ದೂರುಗಳಿವೆ. ಸಿದ್ದಯ್ಯ ಅವರ ಸಾವಿನ ಪ್ರಕರಣವನ್ನು ಭೇದಿಸುವ ಮೂಲಕ ಈ ಅಕ್ರಮ ಚಟುವಟಿಕೆಗಳಿಗೂ ತಡೆ ಹಾಕಬಹುದು’ ಎಂದು ಮನವಿಯಲ್ಲಿ ಹೇಳಿದ್ದಾರೆ.</p>.<p>ವೀರಶೈವ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಕೆ.ವಿ.ಪ್ರವೀಣ್, ಪ್ರಮುಖರಾದ ಎ.ಎಸ್.ಪಾಟೀಲ್, ವೃಂದಾ ಜಗದೀಶ್, ಗಿರೀಶ್ ಗುಳೆಹಳ್ಳಿ, ಗುರು ಕಾಗೋಡು, ನಂದೀಶ್ ಸಿರಿವಂತೆ, ಅರುಣ್ ರಾಜ್, ತೇಜಸ್ವಿ ಎಂ.ಆರ್, ವ.ಶಂ.ರಾಮಚಂದ್ರ ಭಟ್, ಸುಭಾಷ್ ಕೌತಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>