<p><strong>ಹೊಳೆಹೊನ್ನೂರು</strong>: ಸ್ವಾಮಿ ವಿವೇಕಾನಂದರು ಇಡೀ ವಿಶ್ವಕ್ಕೆ ಶಾಂತಿ ಮತ್ತು ಮಾನವೀಯತೆಯನ್ನು ಸಾರಿದ ರಾಯಭಾರಿ ಎಂದು ಬಿಜೆಪಿ ಮಂಡಲ ಘಟಕದ ಅಧ್ಯಕ್ಷ ಮಲ್ಲೇಶಪ್ಪ ಹೇಳಿದರು.</p>.<p>ಸಮೀಪದ ಕಲ್ಲಿಹಾಳ್ ಸರ್ಕಲ್ನ ವಿಶ್ವೇಶ್ವರಯ್ಯ ಪ್ರತಿಮೆಯ ಎದುರು ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವಿಶ್ವ ಕಂಡ ಅತ್ಯಂತ ಶ್ರೇಷ್ಠ ಮಹನೀಯರಲ್ಲಿ ವಿವೇಕಾನಂದರು ಒಬ್ಬರು. ಅವರ ಜೀವನ ಮುಂದಿನ ಪೀಳಿಗೆಗೆ ಮಾದರಿ. ಅವರ ಆದರ್ಶ ಯುವ ಪೀಳಿಗೆಯಲ್ಲಿ ನವ ಚೈತನ್ಯವನ್ನು ಮೂಡಿಸುತ್ತದೆ ಎಂದರು.</p>.<p>‘ವಿವೇಕಾನಂದರು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮ ಯುವ ಸಮೂಹ ಸಾಗಬೇಕಾಗಿದೆ. ಮಹನೀಯರ ಜಯಂತಿಗಳು ಅವರ ಸಾಧನೆಗಳನ್ನು ಮೆಲುಕು ಹಾಕುವುದರ ಜೊತೆಗೆ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಸಹಕಾರಿಯಾಗಿವೆ’ ಎಂದು ಯುವ ಮೋರ್ಚಾದ ಅಧ್ಯಕ್ಷ ಪಿ.ಎಸ್. ಕಿರಣ್ ಕುಮಾರ್ ಹೇಳಿದರು. </p>.<p>ಬಿಜೆಪಿ ಮುಖಂಡರಾದ ಉಜ್ಜಿನಪ್ಪ, ನಾಗರಾಜಪ್ಪ, ಚಂದ್ರುಕುಮಾರ್, ಎ.ಎಂ. ಚಂದ್ರಶೇಖರ್, ಚಂದ್ರು, ನಂಜುಂಡಿ, ಅನೂಪ್ ಪಟೇಲ್, ಚಂದು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆಹೊನ್ನೂರು</strong>: ಸ್ವಾಮಿ ವಿವೇಕಾನಂದರು ಇಡೀ ವಿಶ್ವಕ್ಕೆ ಶಾಂತಿ ಮತ್ತು ಮಾನವೀಯತೆಯನ್ನು ಸಾರಿದ ರಾಯಭಾರಿ ಎಂದು ಬಿಜೆಪಿ ಮಂಡಲ ಘಟಕದ ಅಧ್ಯಕ್ಷ ಮಲ್ಲೇಶಪ್ಪ ಹೇಳಿದರು.</p>.<p>ಸಮೀಪದ ಕಲ್ಲಿಹಾಳ್ ಸರ್ಕಲ್ನ ವಿಶ್ವೇಶ್ವರಯ್ಯ ಪ್ರತಿಮೆಯ ಎದುರು ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವಿಶ್ವ ಕಂಡ ಅತ್ಯಂತ ಶ್ರೇಷ್ಠ ಮಹನೀಯರಲ್ಲಿ ವಿವೇಕಾನಂದರು ಒಬ್ಬರು. ಅವರ ಜೀವನ ಮುಂದಿನ ಪೀಳಿಗೆಗೆ ಮಾದರಿ. ಅವರ ಆದರ್ಶ ಯುವ ಪೀಳಿಗೆಯಲ್ಲಿ ನವ ಚೈತನ್ಯವನ್ನು ಮೂಡಿಸುತ್ತದೆ ಎಂದರು.</p>.<p>‘ವಿವೇಕಾನಂದರು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮ ಯುವ ಸಮೂಹ ಸಾಗಬೇಕಾಗಿದೆ. ಮಹನೀಯರ ಜಯಂತಿಗಳು ಅವರ ಸಾಧನೆಗಳನ್ನು ಮೆಲುಕು ಹಾಕುವುದರ ಜೊತೆಗೆ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಸಹಕಾರಿಯಾಗಿವೆ’ ಎಂದು ಯುವ ಮೋರ್ಚಾದ ಅಧ್ಯಕ್ಷ ಪಿ.ಎಸ್. ಕಿರಣ್ ಕುಮಾರ್ ಹೇಳಿದರು. </p>.<p>ಬಿಜೆಪಿ ಮುಖಂಡರಾದ ಉಜ್ಜಿನಪ್ಪ, ನಾಗರಾಜಪ್ಪ, ಚಂದ್ರುಕುಮಾರ್, ಎ.ಎಂ. ಚಂದ್ರಶೇಖರ್, ಚಂದ್ರು, ನಂಜುಂಡಿ, ಅನೂಪ್ ಪಟೇಲ್, ಚಂದು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>