ಶಿವಮೊಗ್ಗದ ಚಾಲುಕ್ಯ ನಗರ ಹಾಗೂ ಗೋಪಾಳದ ಅವರ ಮನೆಗಳ ಮೇಲೆ ಗುರುವಾರ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು 9.4 ಕೆ.ಜಿ. ಚಿನ್ನಾಭರಣ ಹಾಗೂ ಚಿನ್ನದ ಬಿಸ್ಕತ್, 3 ಕೆ.ಜಿ. ಬೆಳ್ಳಿ, 4 ನಿವೇಶನಗಳು, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ತಣಿಗೆರೆಯಲ್ಲಿ 8 ಎಕರೆ ಕೃಷಿ ಭೂಮಿ, ₹ 15.94 ಲಕ್ಷ ನಗದು, ₹ 20 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, 2 ಕಾರು 3 ದ್ವಿಚಕ್ರ ವಾಹನಗಳನ್ನು ಪಟ್ಟಿ ಮಾಡಿದ್ದರು.