<p>ಶಿವಮೊಗ್ಗ: ‘ಶಿಲ್ಪಕಲೆಯೇ ಇಲ್ಲದ ಜಗತ್ತನ್ನು ಊಹಿಸಲೂ ಸಾಧ್ಯವಿಲ್ಲ. ಶಿಲ್ಪಕಲೆ ಭಗವಂತ ನಮಗೆ ನೀಡಿದ ವರ. ಜಕಣಾಚಾರಿಯಂತಹ ಮಹಾನ್ ಶಿಲ್ಪಿಯನ್ನು ನೀಡಿದ ಅವರ ತಾಯಿಗೆ ನಮ್ಮ ನಮನಗಳು’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.</p>.<p>ನಗರದ ಕುವೆಂಪು ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಅಮರಶಿಲ್ಪಿ ಜಕಣಾಚಾರಿಗಳು ಭಗವಂತ ಈ ನಾಡಿಗೆ ನೀಡಿದ ವರವಾಗಿದ್ದು, ಬೇಲೂರು, ಹಳೇಬೀಡಿನ ಶಿಲ್ಪಕಲೆಗಳು ಜಗತ್ಪ್ರಸಿದ್ದಿಯಾಗಲು ಇವರೇ ಕಾರಣಕರ್ತರು. ನಮ್ಮದು ಶಿಲ್ಪಕಲೆ, ಸಾಹತ್ಯ, ಭವ್ಯ ಸಾಂಸ್ಕೃತಿಕ ನೆಲಗಟ್ಟಿನ ನಾಡು. ಅನೇಕ ಸಾಧು-ಸಂತರು, ದಾರ್ಶನಿಕರು ಭವ್ಯವಾದ ಭಾರತ ದೇಶ ಕಟ್ಟಲು ತಮ್ಮನ್ನು ತಾವೇ ಧಾರೆ ಎರೆದುಕೊಂಡಿದ್ದು, ಅವರನ್ನೆಲ್ಲ ನಾವು ಸದಾ ಸ್ಮರಿಸಬೇಕು ಎಂದರು.</p>.<p>‘ನಗರದ ಫ್ಲೈ ಓವರ್ ಅಥವಾ ಯಾವುದಾದರೂ ಮುಖ್ಯ ವೃತ್ತಕ್ಕೆ ಅಮರಶಿಲ್ಪಿ ಜಕಣಾಚಾರಿಗಳ ಹೆಸರನ್ನು ಇಡುವಂತೆ ಸಮುದಾಯದವರು ಮನವಿ ಮಾಡಿದ್ದಾರೆ. ಇದು ನಮ್ಮ ಕರ್ತವ್ಯವೂ ಆಗಿದೆ. ಇಲಾಖೆಯಿಂದ ಪ್ರಸ್ತಾವನೆಯನ್ನು ಸಲ್ಲಿಸಿದರೆ ಸೂಕ್ತ ಜಾಗವೊಂದಕ್ಕೆ ಹೆಸರು ಇಡಲು ಮಾಡಲು ಸಹಕರಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ರಾಣೆಬೆನ್ನೂರಿನ ವಿಶ್ವವಿಭು ರೇಕಿ ಧ್ಯಾನಪೀಠದ ಮೌನೇಶ್ವರ ಆಚಾರ್ಯ ಶೇಷ ಉಪನ್ಯಾಸ ನೀಡಿ ಮಾತನಾಡಿ, ವಿಶ್ವಕರ್ಮ ಪರಂಪರೆ ಪ್ರತಿಭಾವಂತರ, ತಂತ್ರಜ್ಞಾನರ, ಪಂಚವೇದದ, ಪಂಚ ಶಕ್ತಿ, ಪಂಚ ವಿಜ್ಞಾನಗಳ ಪರಂಪರೆ ಹೊಂದಿದೆ. ಶಿಲ್ಪಗಳ ರಚನೆಯು ಸೌಂದರ್ಯದ ಬೀಡು ಮತ್ತು ಭಕ್ತಿಯ ನೆಲೆಯನ್ನಾಗಿ ಈ ನಾಡನ್ನು ರೂಪಿಸಿದೆ ಎಂದರು.</p>.<p>‘ಶಿಲ್ಪಗಳ ಮೂಲಕ ಭಕ್ತಿಯ ಬೀಜ ಬಿತ್ತಿದ ಮಹಾನ್ ಶಿಲ್ಪಿ ಜಕಣಾಚಾರಿ. ವಿಶ್ವಕರ್ಮ ಪರಂಪರೆ ಪ್ರಾಚೀನವಾದ ಐದು ವೇದಗಳನ್ನು ಮಾನ್ಯ ಮಾಡುತ್ತದೆ ಮತ್ತು ಅದಕ್ಕೆ ತಕ್ಕಂತೆ ಆಚರಣೆಗಳೂ ಇರುತ್ತವೆ. ದೇವಶಿಲ್ಪ ಮತ್ತು ಮಾನವ ಶಿಲ್ಪ ಎಂಬ ಪ್ರಕಾರಗಳಿದ್ದು ವೇದಗಳ ಆಚರಣೆ ಅನುಸಾರ ಈ ಶಿಲ್ಪಕಲೆಗಳನ್ನು ಕೆತ್ತಲಾಗುತ್ತದೆ’ ಎಂದು ಮಾಹಿತಿ ನೀಡಿದ ಅವರು ಅಮರಶಿಲ್ಪಿ ಜಕಣಾಚಾರಿಗಳ ಜೀವನ ಚರಿತ್ರೆ ಕುರಿತು ವಿವರಣೆ ನೀಡಿದರು.</p>.<p>ಜಿಲ್ಲಾ ವಿಶ್ವಕರ್ಮ ಮಹಾಸಭಾದ ಗೌರವ ಅಧ್ಯಕ್ಷ ಸತ್ಯನಾರಾಯಣ, ಅಗರದಹಳ್ಳಿ ನಿರಂಜನಮೂರ್ತಿ, ಅನ್ನಪೂರ್ಣ ಕಾಳಾಚಾರ್, ರಮೇಶ್, ಶ್ರೀನಿವಾಸಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಎಚ್. ಇದ್ದರು.</p>.<div><blockquote> ನಮ್ಮದು ದೇವನಿರ್ಮಿತ ದೇಶ. ಇದಕ್ಕೆ ಹುಟ್ಟಿದ ದಿನಾಂಕವಿಲ್ಲ. ಹಾಗೆಯೇ ಸಾವಿನ ದಿನಾಂಕವೂ ಇಲ್ಲದ ಚಿರಸ್ಥಾಯಿ ನಮ್ಮ ನೆಲೆವೀಡು. ಅಮರಶಿಲ್ಪಿ ಜಕಣಾಚಾರಿ ಎಂದಿಗೂ ಅಮರ </blockquote><span class="attribution">ಚನ್ನಬಸಪ್ಪ ಶಾಸಕ</span></div>.<div><blockquote>ಜಕಣಾಚಾರಿ ಅವರ ಹೆಸರನ್ನು ನಗರದ ಪ್ರಮುಖ ವೃತ್ತಕ್ಕೆ ಇಡಲು ನನ್ನ ಸಂಪೂರ್ಣ ಸಹಕಾರವಿದೆ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಶೀಘ್ರದಲ್ಲಿ ಮಾತನಾಡುತ್ತೇನೆ </blockquote><span class="attribution">ಸಿ.ಎಸ್.ಚಂದ್ರಭೂಪಾಲ್ ಅಧ್ಯಕ್ಷ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಶಿಲ್ಪಕಲೆಯೇ ಇಲ್ಲದ ಜಗತ್ತನ್ನು ಊಹಿಸಲೂ ಸಾಧ್ಯವಿಲ್ಲ. ಶಿಲ್ಪಕಲೆ ಭಗವಂತ ನಮಗೆ ನೀಡಿದ ವರ. ಜಕಣಾಚಾರಿಯಂತಹ ಮಹಾನ್ ಶಿಲ್ಪಿಯನ್ನು ನೀಡಿದ ಅವರ ತಾಯಿಗೆ ನಮ್ಮ ನಮನಗಳು’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.</p>.<p>ನಗರದ ಕುವೆಂಪು ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಅಮರಶಿಲ್ಪಿ ಜಕಣಾಚಾರಿಗಳು ಭಗವಂತ ಈ ನಾಡಿಗೆ ನೀಡಿದ ವರವಾಗಿದ್ದು, ಬೇಲೂರು, ಹಳೇಬೀಡಿನ ಶಿಲ್ಪಕಲೆಗಳು ಜಗತ್ಪ್ರಸಿದ್ದಿಯಾಗಲು ಇವರೇ ಕಾರಣಕರ್ತರು. ನಮ್ಮದು ಶಿಲ್ಪಕಲೆ, ಸಾಹತ್ಯ, ಭವ್ಯ ಸಾಂಸ್ಕೃತಿಕ ನೆಲಗಟ್ಟಿನ ನಾಡು. ಅನೇಕ ಸಾಧು-ಸಂತರು, ದಾರ್ಶನಿಕರು ಭವ್ಯವಾದ ಭಾರತ ದೇಶ ಕಟ್ಟಲು ತಮ್ಮನ್ನು ತಾವೇ ಧಾರೆ ಎರೆದುಕೊಂಡಿದ್ದು, ಅವರನ್ನೆಲ್ಲ ನಾವು ಸದಾ ಸ್ಮರಿಸಬೇಕು ಎಂದರು.</p>.<p>‘ನಗರದ ಫ್ಲೈ ಓವರ್ ಅಥವಾ ಯಾವುದಾದರೂ ಮುಖ್ಯ ವೃತ್ತಕ್ಕೆ ಅಮರಶಿಲ್ಪಿ ಜಕಣಾಚಾರಿಗಳ ಹೆಸರನ್ನು ಇಡುವಂತೆ ಸಮುದಾಯದವರು ಮನವಿ ಮಾಡಿದ್ದಾರೆ. ಇದು ನಮ್ಮ ಕರ್ತವ್ಯವೂ ಆಗಿದೆ. ಇಲಾಖೆಯಿಂದ ಪ್ರಸ್ತಾವನೆಯನ್ನು ಸಲ್ಲಿಸಿದರೆ ಸೂಕ್ತ ಜಾಗವೊಂದಕ್ಕೆ ಹೆಸರು ಇಡಲು ಮಾಡಲು ಸಹಕರಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ರಾಣೆಬೆನ್ನೂರಿನ ವಿಶ್ವವಿಭು ರೇಕಿ ಧ್ಯಾನಪೀಠದ ಮೌನೇಶ್ವರ ಆಚಾರ್ಯ ಶೇಷ ಉಪನ್ಯಾಸ ನೀಡಿ ಮಾತನಾಡಿ, ವಿಶ್ವಕರ್ಮ ಪರಂಪರೆ ಪ್ರತಿಭಾವಂತರ, ತಂತ್ರಜ್ಞಾನರ, ಪಂಚವೇದದ, ಪಂಚ ಶಕ್ತಿ, ಪಂಚ ವಿಜ್ಞಾನಗಳ ಪರಂಪರೆ ಹೊಂದಿದೆ. ಶಿಲ್ಪಗಳ ರಚನೆಯು ಸೌಂದರ್ಯದ ಬೀಡು ಮತ್ತು ಭಕ್ತಿಯ ನೆಲೆಯನ್ನಾಗಿ ಈ ನಾಡನ್ನು ರೂಪಿಸಿದೆ ಎಂದರು.</p>.<p>‘ಶಿಲ್ಪಗಳ ಮೂಲಕ ಭಕ್ತಿಯ ಬೀಜ ಬಿತ್ತಿದ ಮಹಾನ್ ಶಿಲ್ಪಿ ಜಕಣಾಚಾರಿ. ವಿಶ್ವಕರ್ಮ ಪರಂಪರೆ ಪ್ರಾಚೀನವಾದ ಐದು ವೇದಗಳನ್ನು ಮಾನ್ಯ ಮಾಡುತ್ತದೆ ಮತ್ತು ಅದಕ್ಕೆ ತಕ್ಕಂತೆ ಆಚರಣೆಗಳೂ ಇರುತ್ತವೆ. ದೇವಶಿಲ್ಪ ಮತ್ತು ಮಾನವ ಶಿಲ್ಪ ಎಂಬ ಪ್ರಕಾರಗಳಿದ್ದು ವೇದಗಳ ಆಚರಣೆ ಅನುಸಾರ ಈ ಶಿಲ್ಪಕಲೆಗಳನ್ನು ಕೆತ್ತಲಾಗುತ್ತದೆ’ ಎಂದು ಮಾಹಿತಿ ನೀಡಿದ ಅವರು ಅಮರಶಿಲ್ಪಿ ಜಕಣಾಚಾರಿಗಳ ಜೀವನ ಚರಿತ್ರೆ ಕುರಿತು ವಿವರಣೆ ನೀಡಿದರು.</p>.<p>ಜಿಲ್ಲಾ ವಿಶ್ವಕರ್ಮ ಮಹಾಸಭಾದ ಗೌರವ ಅಧ್ಯಕ್ಷ ಸತ್ಯನಾರಾಯಣ, ಅಗರದಹಳ್ಳಿ ನಿರಂಜನಮೂರ್ತಿ, ಅನ್ನಪೂರ್ಣ ಕಾಳಾಚಾರ್, ರಮೇಶ್, ಶ್ರೀನಿವಾಸಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಎಚ್. ಇದ್ದರು.</p>.<div><blockquote> ನಮ್ಮದು ದೇವನಿರ್ಮಿತ ದೇಶ. ಇದಕ್ಕೆ ಹುಟ್ಟಿದ ದಿನಾಂಕವಿಲ್ಲ. ಹಾಗೆಯೇ ಸಾವಿನ ದಿನಾಂಕವೂ ಇಲ್ಲದ ಚಿರಸ್ಥಾಯಿ ನಮ್ಮ ನೆಲೆವೀಡು. ಅಮರಶಿಲ್ಪಿ ಜಕಣಾಚಾರಿ ಎಂದಿಗೂ ಅಮರ </blockquote><span class="attribution">ಚನ್ನಬಸಪ್ಪ ಶಾಸಕ</span></div>.<div><blockquote>ಜಕಣಾಚಾರಿ ಅವರ ಹೆಸರನ್ನು ನಗರದ ಪ್ರಮುಖ ವೃತ್ತಕ್ಕೆ ಇಡಲು ನನ್ನ ಸಂಪೂರ್ಣ ಸಹಕಾರವಿದೆ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಶೀಘ್ರದಲ್ಲಿ ಮಾತನಾಡುತ್ತೇನೆ </blockquote><span class="attribution">ಸಿ.ಎಸ್.ಚಂದ್ರಭೂಪಾಲ್ ಅಧ್ಯಕ್ಷ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>