<p>ಸೊರಬ:ತಾಲ್ಲೂಕಿನ ಚಿತ್ರಟ್ಟೆಹಳ್ಳಿ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಜಾತ್ರಾ ಕಾರ್ಯಕ್ರಮ ಮುಗಿಸಿಕೊಂಡು ಟಾಟಾ ಏಸ್ನಲ್ಲಿ ಮನೆಗೆ ಮರಳುತ್ತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದು ಒಂದೇ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ತಾಲ್ಲೂಕಿನ ತವನಂದಿ ಗ್ರಾಮದ ಯೋಗರಾಜಪ್ಪ (57), ತಿಮ್ಮಪ್ಪ (45) ಹಾಗೂ ಆಕಾಶ್ (13) ಮೃತಪಟ್ಟವರು.</p>.<p>ಸಾಗರ ತಾಲ್ಲೂಕಿನ ಗುತ್ತನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರೆಗೆ ತೆರಳಿದ್ದ ಅವರು, ರಾತ್ರಿ ಗ್ರಾಮಕ್ಕೆ ವಾಪಸಾಗು<br />ತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನವು ಮರಕ್ಕೆ ಡಿಕ್ಕಿ ಹೊಡೆದಿದೆ.</p>.<p>ಗಂಭೀರವಾಗಿ ಗಾಯಗೊಂಡಿರುವ ಬಸವರಾಜ್, ಹುಚ್ಚರಾಯಪ್ಪ, ಪರಶುರಾಮ, ಕೃಷ್ಣಪ್ಪ, ಜಗದೀಶ, ಚಂದ್ರಪ್ಪ, ಭೀಮಪ್ಪ, ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಚಾಲಕ ಹನುಮಂತಪ್ಪ ಮತ್ತು ನಿರಂಜನ ಇಬ್ಬರೂ ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಎಲ್. ರಾಜಶೇಖರ್ ಹಾಗೂ ಪಿಎಸ್ಐ ದೇವರಾಯ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೊರಬ:ತಾಲ್ಲೂಕಿನ ಚಿತ್ರಟ್ಟೆಹಳ್ಳಿ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಜಾತ್ರಾ ಕಾರ್ಯಕ್ರಮ ಮುಗಿಸಿಕೊಂಡು ಟಾಟಾ ಏಸ್ನಲ್ಲಿ ಮನೆಗೆ ಮರಳುತ್ತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದು ಒಂದೇ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ತಾಲ್ಲೂಕಿನ ತವನಂದಿ ಗ್ರಾಮದ ಯೋಗರಾಜಪ್ಪ (57), ತಿಮ್ಮಪ್ಪ (45) ಹಾಗೂ ಆಕಾಶ್ (13) ಮೃತಪಟ್ಟವರು.</p>.<p>ಸಾಗರ ತಾಲ್ಲೂಕಿನ ಗುತ್ತನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರೆಗೆ ತೆರಳಿದ್ದ ಅವರು, ರಾತ್ರಿ ಗ್ರಾಮಕ್ಕೆ ವಾಪಸಾಗು<br />ತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನವು ಮರಕ್ಕೆ ಡಿಕ್ಕಿ ಹೊಡೆದಿದೆ.</p>.<p>ಗಂಭೀರವಾಗಿ ಗಾಯಗೊಂಡಿರುವ ಬಸವರಾಜ್, ಹುಚ್ಚರಾಯಪ್ಪ, ಪರಶುರಾಮ, ಕೃಷ್ಣಪ್ಪ, ಜಗದೀಶ, ಚಂದ್ರಪ್ಪ, ಭೀಮಪ್ಪ, ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಚಾಲಕ ಹನುಮಂತಪ್ಪ ಮತ್ತು ನಿರಂಜನ ಇಬ್ಬರೂ ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಎಲ್. ರಾಜಶೇಖರ್ ಹಾಗೂ ಪಿಎಸ್ಐ ದೇವರಾಯ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>