<p><strong>ಸಾಗರ: </strong>‘ರಚನಾತ್ಮಕ ಚಟುವಟಿಕೆಗಳಿಗೆ ಒತ್ತು ನೀಡುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಶಿಕ್ಷಕರ ಸಂಘಟನೆಗಳು ಪೂರಕವಾಗಿ ಸ್ಪಂದಿಸಬೇಕು’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಿ.ರುದ್ರಪ್ಪ ಹೇಳಿದರು. </p>.<p>ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶನಿವಾರ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ, ಸಂಘದ ವಾರ್ಷಿಕ ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. </p>.<p>‘ಆಯಾ ಭಾಗದ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವ ಜವಾಬ್ದಾರಿ ಶಿಕ್ಷಕರ ಸಂಘಟನೆಗಳ ಮೇಲಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವ ಕೆಲಸವನ್ನು ಶಿಕ್ಷಕರು ಮಾಡಬೇಕಿದೆ. ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ರೀತಿಯಲ್ಲಿ ಕಾರ್ಯಾಗಾರಗಳು ನಡೆಯಬೇಕಿದೆ’ ಎಂದು ಅಭಿಪ್ರಾಯಪಟ್ಟರು. </p>.<p>‘ಇತರ ಇಲಾಖೆಗಳಿಗಿಂತ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರ ಮೇಲಿರುವ ಹೊಣೆಗಾರಿಕೆ ಹೆಚ್ಚು ಮಹತ್ವದ್ದಾಗಿದೆ. ಕೆಲವೇ ಶಿಕ್ಷಕರು ಮಾಡುವ ತಪ್ಪುಗಳಿಂದ ಇಡೀ ಶಿಕ್ಷಕ ಸಮೂಹದ ಮೇಲೆ ಆರೋಪ ಬರುತ್ತದೆ ಎಂಬ ಎಚ್ಚರಿಕೆ ಎಲ್ಲಾ ಶಿಕ್ಷಕರಲ್ಲಿರಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಹೇಳಿದರು. </p>.<p>‘ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಶಿಕ್ಷಣ ಇಲಾಖೆಯ ಆಡಳಿತದಲ್ಲಿ ಶಿಕ್ಷಕರನ್ನು ಸಕ್ರಿಯವಾಗಿ ತೊಡಗಿಸುವ ಕೆಲಸದಲ್ಲಿ ನಮ್ಮ ಸಂಘಟನೆ ಕ್ರಿಯಾಶೀಲವಾಗಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಮಾಲತೇಶ್ ಹೇಳಿದರು. </p>.<p>ಶಿಕ್ಷಕರಲ್ಲಿ ಆರ್ಥಿಕ ನಿರ್ವಹಣೆ ಕುರಿತು ಶಿಕಾರಿಪುರದ ಶಂಕರ್ ಉಪನ್ಯಾಸ ನೀಡಿದರು. ಪ್ರಮುಖರಾದ ಅನ್ನಪೂರ್ಣ, ಭೂಮೇಶ್, ಜಗನ್ನಾಥ್ ಕೆ. ದೇವೇಂದ್ರಪ್ಪ, ಪ್ರಥ್ವಿ, ಗಣಪತಿ, ಮಂಜುನಾಥ, ಭೂಕೇಶ್ವರಪ್ಪ,ಕವಿರಾಜ್, ವಿಕ್ಟೋರಿಯಾ ಫರ್ನಾಂಡಿಸ್, ಗವಿಯಪ್ಪ ಎಲ್.ಟಿ. ಹೂವಪ್ಪ, ಮೂರ್ತಿ ಎಂ.ವೈ. ಇದ್ದರು. </p>.<p>ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು, ನಿವೃತ್ತ ಶಿಕ್ಷಕರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದಿನೇಶ್ ಎನ್.ಕೆ. ಸ್ವಾಗತಿಸಿದರು. ಮನೋಹರ ಟಿ.ವಿ.ವಂದಿಸಿದರು. ಶಂಕರ್ ಜಿ.ಕೆ. ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>‘ರಚನಾತ್ಮಕ ಚಟುವಟಿಕೆಗಳಿಗೆ ಒತ್ತು ನೀಡುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಶಿಕ್ಷಕರ ಸಂಘಟನೆಗಳು ಪೂರಕವಾಗಿ ಸ್ಪಂದಿಸಬೇಕು’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಿ.ರುದ್ರಪ್ಪ ಹೇಳಿದರು. </p>.<p>ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶನಿವಾರ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ, ಸಂಘದ ವಾರ್ಷಿಕ ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. </p>.<p>‘ಆಯಾ ಭಾಗದ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವ ಜವಾಬ್ದಾರಿ ಶಿಕ್ಷಕರ ಸಂಘಟನೆಗಳ ಮೇಲಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವ ಕೆಲಸವನ್ನು ಶಿಕ್ಷಕರು ಮಾಡಬೇಕಿದೆ. ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ರೀತಿಯಲ್ಲಿ ಕಾರ್ಯಾಗಾರಗಳು ನಡೆಯಬೇಕಿದೆ’ ಎಂದು ಅಭಿಪ್ರಾಯಪಟ್ಟರು. </p>.<p>‘ಇತರ ಇಲಾಖೆಗಳಿಗಿಂತ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರ ಮೇಲಿರುವ ಹೊಣೆಗಾರಿಕೆ ಹೆಚ್ಚು ಮಹತ್ವದ್ದಾಗಿದೆ. ಕೆಲವೇ ಶಿಕ್ಷಕರು ಮಾಡುವ ತಪ್ಪುಗಳಿಂದ ಇಡೀ ಶಿಕ್ಷಕ ಸಮೂಹದ ಮೇಲೆ ಆರೋಪ ಬರುತ್ತದೆ ಎಂಬ ಎಚ್ಚರಿಕೆ ಎಲ್ಲಾ ಶಿಕ್ಷಕರಲ್ಲಿರಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಹೇಳಿದರು. </p>.<p>‘ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಶಿಕ್ಷಣ ಇಲಾಖೆಯ ಆಡಳಿತದಲ್ಲಿ ಶಿಕ್ಷಕರನ್ನು ಸಕ್ರಿಯವಾಗಿ ತೊಡಗಿಸುವ ಕೆಲಸದಲ್ಲಿ ನಮ್ಮ ಸಂಘಟನೆ ಕ್ರಿಯಾಶೀಲವಾಗಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಮಾಲತೇಶ್ ಹೇಳಿದರು. </p>.<p>ಶಿಕ್ಷಕರಲ್ಲಿ ಆರ್ಥಿಕ ನಿರ್ವಹಣೆ ಕುರಿತು ಶಿಕಾರಿಪುರದ ಶಂಕರ್ ಉಪನ್ಯಾಸ ನೀಡಿದರು. ಪ್ರಮುಖರಾದ ಅನ್ನಪೂರ್ಣ, ಭೂಮೇಶ್, ಜಗನ್ನಾಥ್ ಕೆ. ದೇವೇಂದ್ರಪ್ಪ, ಪ್ರಥ್ವಿ, ಗಣಪತಿ, ಮಂಜುನಾಥ, ಭೂಕೇಶ್ವರಪ್ಪ,ಕವಿರಾಜ್, ವಿಕ್ಟೋರಿಯಾ ಫರ್ನಾಂಡಿಸ್, ಗವಿಯಪ್ಪ ಎಲ್.ಟಿ. ಹೂವಪ್ಪ, ಮೂರ್ತಿ ಎಂ.ವೈ. ಇದ್ದರು. </p>.<p>ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು, ನಿವೃತ್ತ ಶಿಕ್ಷಕರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದಿನೇಶ್ ಎನ್.ಕೆ. ಸ್ವಾಗತಿಸಿದರು. ಮನೋಹರ ಟಿ.ವಿ.ವಂದಿಸಿದರು. ಶಂಕರ್ ಜಿ.ಕೆ. ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>