‘ಕಾಂಗ್ರೆಸ್ ಪಕ್ಷವು ಈ ಬಾರಿ ವ್ಯವಸ್ಥಿತವಾಗಿ ಚುನಾವಣೆ ಎದುರಿಸುತ್ತಿದೆ. ಸರ್ಕಾರದ ಸಾಧನೆಗಳು ನಮಗೆ ಪೂರಕವಾಗಿವೆ. ಶಿಕ್ಷಣ ಇಲಾಖೆಯಲ್ಲಿ ಹಲವಾರು ಬದಲಾವಣೆ ಕೂಡ ಮಾಡಲಾಗಿದೆ. ಮಧು ಬಂಗಾರಪ್ಪ ಸಚಿವರಾದ ಮೇಲೆ 13,500 ಶಿಕ್ಷಕರ ನೇಮಕಾತಿ ಮಾಡಿ ಅವರಿಗೆ ಆದೇಶ ಪತ್ರ ನೀಡಿರುವ ಹಿನ್ನೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದು ಬದಲಾವಣೆಯ ಸಂಕೇತವಾಗಿದೆ’ ಎಂದರು.