ಶಿವಮೊಗ್ಗ: ಕಡಿದಾಳ ಪ್ರಕಾಶ್ ಅವರು ಬರೆದಿರುವ ’ನಾ ಕಂಡಂತೆ ತೇಜಸ್ವಿ ; ಶಾಮಣ್ಣ‘ ಪುಸ್ತಕದ ಬಿಡುಗಡೆ ಸಮಾರಂಭ ಜೂನ್ 3ರ ಶನಿವಾರ ಸಂಜೆ 5 ಗಂಟೆಗೆ ನಡೆಯಲಿದೆ.
ಬಹುಮುಖಿ ಶಿವಮೊಗ್ಗ ಹಾಗೂ ಮೈಸೂರಿನ ಅಭಿರುಚಿ ಪ್ರಕಾಶನ ಜಂಟಿಯಾಗಿ ಕುವೆಂಪು ರಂಗ ಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಹಿತಿ ಪುಟ್ಟಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವನ್ಯಜೀವಿ ತಜ್ಞರಾದ ಕೃಪಾಕರ- ಸೇನಾನಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಅತಿಥಿಯಾಗಿ ಸಾಹಿತಿ ಜಯಂತ್ ಕಾಯ್ಕಿಣಿ ಆಗಮಿಸಲಿದ್ದಾರೆ. ನಂತರ ಸಂವಾದ ಕಾರ್ಯಕ್ರಮವು ಇರುತ್ತದೆ.