ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಯೋಜನೆ ತಿಳಿಸಿ ಪಕ್ಷ ಸಂಘಟಿಸಿ: ಸಂಸದ ಬಿ.ವೈ. ರಾಘವೇಂದ್ರ

Last Updated 27 ನವೆಂಬರ್ 2022, 4:16 IST
ಅಕ್ಷರ ಗಾತ್ರ

ಶಿಕಾರಿಪುರ:ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷ ಸಂಘಟಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ನೀಡುತ್ತಿದೆ. ಮಾತೃವಂದನಾ, ಸುಕನ್ಯ ಸಮೃದ್ಧಿ ಯೋಜನೆ, ‘ಬೇಟಿ ಪಡಾವೋ ಬೇಟಿ ಬಚಾವೋ’ ಯೋಜನೆ, ಪೋಷಣ್ ಅಭಿಯಾನ, ಉಜ್ವಲ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಮಹಿಳೆಯರಿಗೆ ನೀಡಿದೆ. ಮಹಿಳಾ ಮೋರ್ಚಾ ಪದಾಧಿಕಾರಿಗಳು ಪಕ್ಷ ಸಂಘಟನೆಗಾಗಿ ಸಮಯ ಮೀಸಲಿಡಬೇಕು ಎಂದು ಸಲಹೆ ನೀಡಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಎಂಸಿಎ ನಿರ್ದೇಶಕ ಕೆ.ಜಿ. ವಸಂತಗೌಡ್ರು, ತಾಲ್ಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುನಾಥ್ ಸಿಂಗ್, ಮಾಜಿ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT