ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಮು ಪಕ್ಷಿ ಸಾವು: ಹಕ್ಕಿಜ್ವರ ಭೀತಿ

Last Updated 19 ಜನವರಿ 2021, 1:19 IST
ಅಕ್ಷರ ಗಾತ್ರ

ಶಿವಮೊಗ್ಗ: ಹಕ್ಕಿಜ್ವರ ಭೀತಿ ನಡುವೆ ತ್ಯಾವರಕೊಪ್ಪದಲ್ಲಿರುವ ಸಿಂಹಧಾಮದಲ್ಲಿ ಎಮು ಪಕ್ಷಿ ಭಾನುವಾರ ಮೃತಪಟ್ಟಿದ್ದು, ಅಂಗಾಗ ಮತ್ತು ರಕ್ತದ ಮಾದರಿಗಳನ್ನು ಬೆಂಗಳೂರು ಹಾಗೂ ಭೋಪಾಲ್‌ನ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.

‘ಇದರ ಸಾವಿಗೆ ಪರಸ್ಪರ ಕಿತ್ತಾಟವೇ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.ಇಲ್ಲಿ 6 ಎಮುಗಳಿದ್ದವು. ಪಶುಸಂಗೋಪನೆ ಇಲಾಖೆ ವೈದ್ಯರು ಮೃತಪಕ್ಷಿಯ ಪರೀಕ್ಷೆ ನಡೆಸಿದ್ದಾರೆ. ಪಕ್ಷಿ ಜ್ವರದ ಭೀತಿ ಇರುವ ಕಾರಣ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಸಫಾರಿಯ ನಿರ್ದೇಶಕ ಮುಕುಂದ್‌ಚಂದ್ ತಿಳಿಸಿದರು.

‘ಒಂದೂವರೆ ವರ್ಷದ ಹಿಂದೆಯೂ ಒಂದು ಎಮು ಪಕ್ಷಿ ಸಾವಿಗೀಡಾಗಿತ್ತು. ಹಕ್ಕಿಜ್ವರದ ಭೀತಿಯ ಕಾರಣ ಔಷಧಗಳನ್ನು ಸಿಂಪಡಿಸಲಾಗಿದೆ. ಸಿಬ್ಬಂದಿಗೆ ಮುಂಜಾಗ್ರತೆ ಕುರಿತು ಮಾಹಿತಿ ನೀಡಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT