ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲದ ಹೊರೆ: ರೈತ ಆತ್ಮಹತ್ಯೆ

Last Updated 24 ಏಪ್ರಿಲ್ 2022, 7:25 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ:ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದ ರೈತ ಎಸ್‌. ವಸಂತ ಕುಮಾರ (34) ಅವರು ಸಾಲದ ಹೊರೆಯಿಂದ ಕಳೆನಾಶಕ ಸೇವಿಸಿಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಐದು ವರ್ಷಗಳಿಂದ ಜಮೀನು ಬಾಡಿಗೆ ಪಡೆದು ಶುಂಠಿ ಬೆಳೆದಿದ್ದರು. ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿ ಕೈಸುಟ್ಟುಕೊಂಡಿದ್ದರು. ಸಂಘ–ಸಂಸ್ಥೆ ಹಾಗೂ ಖಾಸಗಿ ಸಾಲ ಸೇರಿ ₹ 15 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು.ಸಾಲದ ಹೊರೆಯಿಂದ ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೆತಾರಿಗಾ ಗ್ರಾಮದ ಕಾಡಿನಲ್ಲಿ ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದು ಕುಟುಂಬದವರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ ದಾರಿಹೋಕರು ಕಾಡಿನ ಮಧ್ಯೆ ಬೈಕ್ ನಿಂತಿದ್ದು ಗಮನಿಸಿ ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ಅವರಿಗೆ ‌ಪತ್ನಿ ಹಾಗೂ ಒಂದು ವರ್ಷದ ಹೆಣ್ಣುಮಗು ಇದೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT