ಅಡಿಕೆ ಖೇಣಿ ವಹಿಸಿಕೊಂಡು ವ್ಯವಹಾರ ಮಾಡುತ್ತಿದ್ದ ಅವರು, ಅಡಿಕೆ ಬೆಲೆ ಏರಿಳಿತದಿಂದ ನಷ್ಟ ಅನುಭವಿಸಿದ್ದರು. ಖೇಣಿಗಾಗಿ ಖಾಸಗಿ, ಬ್ಯಾಂಕ್ ಹಾಗೂ ಸಹಕಾರ ಸಂಘಗಳಲ್ಲಿ ₹ 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೇ ನೇಣು ಹಾಕಿಕೊಂಡಿದ್ದಾರೆ ಎಂದು ದಂಪತಿಯ ಮಕ್ಕಳು ತಿಳಿಸಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.