ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲದ ಹೊರೆ: ದಂಪತಿ ಆತ್ಮಹತ್ಯೆ

Last Updated 14 ಜನವರಿ 2022, 5:57 IST
ಅಕ್ಷರ ಗಾತ್ರ

ಕೋಣಂದೂರು: ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ಅಡಿಕೆ ಖೇಣಿ ವಹಿಸಿಕೊಂಡು ನಷ್ಟ ಅನುಭವಿಸಿ, ಸಾಲ ತೀರಿಸಲಾಗದೇ ದಂಪತಿ ಗುರುವಾರಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದಮಂಜುನಾಥ್ (46),ಉಷಾ (43) ಆತ್ಮಹತ್ಯೆ ಮಾಡಿಕೊಂಡವರು.

ಅಡಿಕೆ ಖೇಣಿ ವಹಿಸಿಕೊಂಡು ವ್ಯವಹಾರ ಮಾಡುತ್ತಿದ್ದ ಅವರು, ಅಡಿಕೆ ಬೆಲೆ ಏರಿಳಿತದಿಂದ ನಷ್ಟ ಅನುಭವಿಸಿದ್ದರು. ಖೇಣಿಗಾಗಿ ಖಾಸಗಿ, ಬ್ಯಾಂಕ್‌ ಹಾಗೂ ಸಹಕಾರ ಸಂಘಗಳಲ್ಲಿ ₹ 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೇ ನೇಣು ಹಾಕಿಕೊಂಡಿದ್ದಾರೆ ಎಂದು ದಂಪತಿಯ ಮಕ್ಕಳು ತಿಳಿಸಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

ಎರಡು ದಿನಗಳಿಂದ ನಾಪತ್ತೆಯಾಗಿದ್ದ ದಂಪತಿ ಗುರುವಾರ ಮನೆಯಲ್ಲಿ ನೇಣುಹಾಕಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT