ಹೊಸನಗರ: ತಾಲ್ಲೂಕಿನದುಮ್ಮ ಗ್ರಾಮದ ನೆವಲೋಡಿಯ ಗ್ರಾಮದಲ್ಲಿ ಸಾಲದ ಹೊರೆಯಿಂದ ರೈತಹಾಲಪ್ಪ (35) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಲಪ್ಪ ಸ್ಥಳೀಯ ಕಳೂರು ಸಹಕಾರ ಸಂಘ ಸೇರಿ ಖಾಸಗಿಯಾಗಿ ₹ 1 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು.ಸೋಮವಾರ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಅವರಿಗೆ ಪತ್ನಿ, ಪುತ್ರಿ ಇದ್ದಾರೆ.ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.