<p><strong>ಶಿವಮೊಗ್ಗ: </strong>‘ಕಾಂಗ್ರೆಸ್ ಅಧಿಕಾರಕ್ಕೆ ಆಸೆ ಪಡೋ ಪಕ್ಷ ಅಲ್ಲ. ಸೇವಾ ಮನೋಭಾವ ಇರುವ ಪಕ್ಷ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.</p>.<p>ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದರ ಕುರಿತು ಯಾರೂ ಮಾತನಾಡಬಾರದು, ಇದು ಸೂಕ್ತ ಸಮಯವಲ್ಲ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟ ಸೂಚನೆ ನೀಡಿದ್ದಾರೆ. ಹಾಗಾಗಿ, ನಾವೆಲ್ಲಾ ಒಟ್ಟಾಗಿದ್ದೇವೆ’ ಎಂದರು.</p>.<p>‘ಬಿಜೆಪಿ ಸರ್ಕಾರ ಅಧಿಕಾರದ ದಾಹಕ್ಕಾಗಿ ಪರಸ್ಪರ ಕಚ್ಚಾಟದಲ್ಲಿ ತೊಡಗಿದೆ. ಇದನ್ನು ನಾವು ಹೇಳುತ್ತಿಲ್ಲ, ಅವರದೇ ಪಕ್ಷದ ಯತ್ನಾಳ್, ವಿಶ್ವನಾಥ್ ಹೇಳುತ್ತಿದ್ದಾರೆ. ಆದರೂ, ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಯಾಕೆಂದರೆ ಅವರ ಹಿಂದೆ ಅವರ ಪಕ್ಷದ ಹೈಕಮಾಂಡ್ ಇದೆ’ ಎಂದು ಕುಟುಕಿದರು.</p>.<p>‘ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷಗಳ ಕಾಲ ಯಾವುದೇ ಆಪಾದನೆ ಇಲ್ಲದೇ, ಭ್ರಷ್ಟಾಚಾರ ಇಲ್ಲದೇ ಒಳ್ಳೆಯ ಕಾರ್ಯಕ್ರಮ ರೂಪಿಸುವ ಮೂಲಕ ಉತ್ತಮ ಆಡಳಿತ ನೀಡಿದ್ದೇವೆ. ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>‘ಕಾಂಗ್ರೆಸ್ ಅಧಿಕಾರಕ್ಕೆ ಆಸೆ ಪಡೋ ಪಕ್ಷ ಅಲ್ಲ. ಸೇವಾ ಮನೋಭಾವ ಇರುವ ಪಕ್ಷ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.</p>.<p>ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದರ ಕುರಿತು ಯಾರೂ ಮಾತನಾಡಬಾರದು, ಇದು ಸೂಕ್ತ ಸಮಯವಲ್ಲ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟ ಸೂಚನೆ ನೀಡಿದ್ದಾರೆ. ಹಾಗಾಗಿ, ನಾವೆಲ್ಲಾ ಒಟ್ಟಾಗಿದ್ದೇವೆ’ ಎಂದರು.</p>.<p>‘ಬಿಜೆಪಿ ಸರ್ಕಾರ ಅಧಿಕಾರದ ದಾಹಕ್ಕಾಗಿ ಪರಸ್ಪರ ಕಚ್ಚಾಟದಲ್ಲಿ ತೊಡಗಿದೆ. ಇದನ್ನು ನಾವು ಹೇಳುತ್ತಿಲ್ಲ, ಅವರದೇ ಪಕ್ಷದ ಯತ್ನಾಳ್, ವಿಶ್ವನಾಥ್ ಹೇಳುತ್ತಿದ್ದಾರೆ. ಆದರೂ, ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಯಾಕೆಂದರೆ ಅವರ ಹಿಂದೆ ಅವರ ಪಕ್ಷದ ಹೈಕಮಾಂಡ್ ಇದೆ’ ಎಂದು ಕುಟುಕಿದರು.</p>.<p>‘ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷಗಳ ಕಾಲ ಯಾವುದೇ ಆಪಾದನೆ ಇಲ್ಲದೇ, ಭ್ರಷ್ಟಾಚಾರ ಇಲ್ಲದೇ ಒಳ್ಳೆಯ ಕಾರ್ಯಕ್ರಮ ರೂಪಿಸುವ ಮೂಲಕ ಉತ್ತಮ ಆಡಳಿತ ನೀಡಿದ್ದೇವೆ. ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>