ಹಿರಿಯ ವ್ಯವಹಾರ ನ್ಯಾಯಾಧೀಶರಾದ ಕೆ. ಪುಷ್ಪಲತಾ ಮಾತನಾಡಿ, ‘ಯಾವುದೋ ಒಂದು ಸಣ್ಣ ವಿಷಯಕ್ಕೆ ಪತಿ–ಪತ್ನಿ ಜಗಳ ಮಾಡಿಕೊಂಡು ವಿಚ್ಛೇದನ ಪಡೆಯುವ ಪ್ರಕರಣಗಳು ಹೆಚ್ಚುತ್ತಿವೆ. ದಂಪತಿ ತಾಳ್ಮೆಯಿಂದ ಆಲೋಚಿಸಿದರೆ ತಪ್ಪಿನ ಅರಿವು ತಿಳಿಯುತ್ತದೆ. ಅದರೆ ಅಷ್ಟರ ಒಳಗೆ ಕಾಲ ಮಿಂಚಿ ಹೋಗಿರುತ್ತದೆ. ಯಾವುದೇ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವುದಕ್ಕಿಂತ ಮುಂಚೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳಲಿ. ಮುಂದಿನ ದಿನಗಳಲ್ಲಿವಿಚ್ಛೇದನ ಪ್ರಕರಣಗಳನ್ನು ಸಂಧಾನದ ಮೂಲಕವೇ ಬಗೆ ಹರಿಸಲು ಪ್ರಯತ್ನಿಸಬೇಕು’ ಎಂದರು.