ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿಗಾಗಿ ಪಟ್ಟಣಕ್ಕೆ ಬಂದ ಜಿಂಕೆ ಸಾವು

Last Updated 12 ಏಪ್ರಿಲ್ 2021, 14:01 IST
ಅಕ್ಷರ ಗಾತ್ರ

ಆನವಟ್ಟಿ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಹಿಂದಿನ ಆವರಣದಲ್ಲಿ ನೀರು ಕುಡಿಯಲು ಬಂದ ಜಿಂಕೆಯೊಂದುಕೆಸರಿನಲ್ಲಿ ಸಿಲುಕಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಿ, ಕಾಡಿಗೆ ಬಿಡುವ ಸಂದರ್ಭದಲ್ಲಿ ಮೃತಪಟ್ಟಿದೆ.

‘ಜಿಂಕೆ ಹೃದಯಾಘಾತದಿಂದ ಮೃತಪಟ್ಟಿದೆ’ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ಮಾರ್ಚ್ ತಿಂಗಳು ಪ್ರಾರಂಭವಾಗುತ್ತಿದಂತೆ ಕಾಡಿನಲ್ಲಿರುವ ಕೆರೆಗಳ ನೀರು ಖಾಲಿಯಾಗಿ, ಕಾಡು ಪ್ರಾಣಿಗಳು ನೀರಿಗಾಗಿ ಊರಿಗೆ ಬರುತ್ತವೆ. ಹೀಗೆ ಬಂದ ಜಿಂಕೆಯನ್ನು ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಆಗ ಅದು ಕೆಸರಿನಲ್ಲಿ ಸಿಲುಕಿಕೊಂಡಿದೆ. ಜಿಂಕೆ ಬಹಳ ಬೇಗ ಗಾಬರಿಗೊಳ್ಳುತ್ತದೆ ಮತ್ತು ಹೃದಯಾಘಾತಕ್ಕೆ ಒಳಗಾಗುವ ಪ್ರಾಣಿಯಾಗಿದೆ. ನಾಯಿಗಳು ಅಟ್ಟಿಸಿಕೊಂಡ ಬಂದಿದ್ದರಿಂದ ಗಾಬರಿಗೊಂಡಿತ್ತು. ಚಿಕಿತ್ಸೆ ನೀಡಿದರೂ ಸ್ಪಂದಿಸಲಿಲ್ಲ’ ಎಂದು ಆನವಟ್ಟಿಯ ಉಪ ಅರಣ್ಯ ಅಧಿಕಾರಿ ಜಾವಿದ್ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT