<p><strong>ಸಾಗರ</strong>: ಹವ್ಯಕರ ಸಂಘಟನೆ ಬೆಂಗಳೂರಿನಂತಹ ನಗರಕ್ಕೆ ಸೀಮಿತವಾಗದೆ ಹವ್ಯಕರು ನೆಲೆಸಿರುವ ಎಲ್ಲೆಡೆ ಅದರ ಚಟುವಟಿಕೆ ನಡೆಯುವಂತೆ ಎಚ್ಚರ ವಹಿಸಲಾಗುತ್ತಿದೆ ಎಂದು ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ಹೇಳಿದರು.</p>.<p>ಇಲ್ಲಿನ ರಾಘವೇಶ್ವರ ಸಭಾಭವನದಲ್ಲಿ ಅಖಿಲ ಹವ್ಯಕ ಮಹಾಸಭಾದ ತಾಲ್ಲೂಕು ಘಟಕ ಭಾನುವಾರ ಏರ್ಪಡಿಸಿದ್ದ ‘ಪ್ರತಿಬಿಂಬ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಹವ್ಯಕ ಬಾಂಧವರು ಸಮಾಜದ ಸಂಘಟನೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಹವ್ಯಕ ಸಮಾಜದ ಜೊತೆಗೆ ಕೈಜೋಡಿಸಬೇಕು. ಹವ್ಯಕ ಸಮುದಾಯದಲ್ಲಿ ಅಪಾರ ಸಂಖ್ಯೆಯಲ್ಲಿ ಪ್ರತಿಭಾವಂತರು ಇದ್ದಾರೆ. ಅಂತವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಹಾಸಭಾ ಮಾಡುತ್ತಿದೆ ಎಂದರು.</p>.<p>‘ಯಾವುದೇ ಸಮುದಾಯ ತನ್ನ ಹಕ್ಕನ್ನು ಪಡೆಯಬೇಕಾದರೆ ಸಂಘಟನೆ ಹೊಂದಬೇಕಾದದ್ದು ಅನಿವಾರ್ಯವಾಗಿದೆ. ಹವ್ಯಕ ಸಮುದಾಯ ಕೂಡ ಈ ಮಾತಿಗೆ ಹೊರತಾಗಿಲ್ಲ. ಸಂಘಟನೆಯಿಂದಲೇ ಸಮುದಾಯಕ್ಕೆ ಹಲವು ಸೌಲಭ್ಯ ದೊರಕುತ್ತಿವೆ’ ಎಂದು ಸಾಗರ ನಗರ ಯೋಜನಾ ಪ್ರಾಧಿಕಾರದ ಸದಸ್ಯ ವಿನಾಯಕರಾವ್ ಮನೆಘಟ್ಟ ಹೇಳಿದರು.</p>.<p>‘ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಈ ಭಾಗದಲ್ಲಿ ಹವ್ಯಕರು ಮುಂಚೂಣಿಯಲ್ಲಿದ್ದಾರೆ. ಆದರೆ ರಾಜಕೀಯವಾಗಿ ಹಿನ್ನಡೆಯಾಗಿದೆ. ಈ ಕೊರತೆಯನ್ನು ತುಂಬುವ ಅಗತ್ಯವಿದೆ’ ಎಂದು ತಾಲ್ಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರವೀಶ್ ಕುಮಾರ್ ಅಭಿಪ್ರಾಯಪಟ್ಟರು.</p>.<p>ಹವ್ಯಕ ಮಹಾಸಭಾದ ತಾಲ್ಲೂಕು ಮಾಜಿ ಅಧ್ಯಕ್ಷ ಕಲಸೆ ಶ್ರೀಧರ ಭಟ್, ಪ್ರಮುಖರಾದ ಈಳಿ ಶ್ರೀಧರ್ ಇದ್ದರು. ಮೇಘಾ ಪ್ರಾರ್ಥಿಸಿದರು. ಹು.ಭಾ.ಅಶೋಕ್ ಸ್ವಾಗತಿಸಿದರು. ಶ್ರೀಧರ ಭಟ್ ವಂದಿಸಿದರು. ವಿಷ್ಣುಮೂರ್ತಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ಹವ್ಯಕರ ಸಂಘಟನೆ ಬೆಂಗಳೂರಿನಂತಹ ನಗರಕ್ಕೆ ಸೀಮಿತವಾಗದೆ ಹವ್ಯಕರು ನೆಲೆಸಿರುವ ಎಲ್ಲೆಡೆ ಅದರ ಚಟುವಟಿಕೆ ನಡೆಯುವಂತೆ ಎಚ್ಚರ ವಹಿಸಲಾಗುತ್ತಿದೆ ಎಂದು ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ಹೇಳಿದರು.</p>.<p>ಇಲ್ಲಿನ ರಾಘವೇಶ್ವರ ಸಭಾಭವನದಲ್ಲಿ ಅಖಿಲ ಹವ್ಯಕ ಮಹಾಸಭಾದ ತಾಲ್ಲೂಕು ಘಟಕ ಭಾನುವಾರ ಏರ್ಪಡಿಸಿದ್ದ ‘ಪ್ರತಿಬಿಂಬ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಹವ್ಯಕ ಬಾಂಧವರು ಸಮಾಜದ ಸಂಘಟನೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಹವ್ಯಕ ಸಮಾಜದ ಜೊತೆಗೆ ಕೈಜೋಡಿಸಬೇಕು. ಹವ್ಯಕ ಸಮುದಾಯದಲ್ಲಿ ಅಪಾರ ಸಂಖ್ಯೆಯಲ್ಲಿ ಪ್ರತಿಭಾವಂತರು ಇದ್ದಾರೆ. ಅಂತವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಹಾಸಭಾ ಮಾಡುತ್ತಿದೆ ಎಂದರು.</p>.<p>‘ಯಾವುದೇ ಸಮುದಾಯ ತನ್ನ ಹಕ್ಕನ್ನು ಪಡೆಯಬೇಕಾದರೆ ಸಂಘಟನೆ ಹೊಂದಬೇಕಾದದ್ದು ಅನಿವಾರ್ಯವಾಗಿದೆ. ಹವ್ಯಕ ಸಮುದಾಯ ಕೂಡ ಈ ಮಾತಿಗೆ ಹೊರತಾಗಿಲ್ಲ. ಸಂಘಟನೆಯಿಂದಲೇ ಸಮುದಾಯಕ್ಕೆ ಹಲವು ಸೌಲಭ್ಯ ದೊರಕುತ್ತಿವೆ’ ಎಂದು ಸಾಗರ ನಗರ ಯೋಜನಾ ಪ್ರಾಧಿಕಾರದ ಸದಸ್ಯ ವಿನಾಯಕರಾವ್ ಮನೆಘಟ್ಟ ಹೇಳಿದರು.</p>.<p>‘ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಈ ಭಾಗದಲ್ಲಿ ಹವ್ಯಕರು ಮುಂಚೂಣಿಯಲ್ಲಿದ್ದಾರೆ. ಆದರೆ ರಾಜಕೀಯವಾಗಿ ಹಿನ್ನಡೆಯಾಗಿದೆ. ಈ ಕೊರತೆಯನ್ನು ತುಂಬುವ ಅಗತ್ಯವಿದೆ’ ಎಂದು ತಾಲ್ಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರವೀಶ್ ಕುಮಾರ್ ಅಭಿಪ್ರಾಯಪಟ್ಟರು.</p>.<p>ಹವ್ಯಕ ಮಹಾಸಭಾದ ತಾಲ್ಲೂಕು ಮಾಜಿ ಅಧ್ಯಕ್ಷ ಕಲಸೆ ಶ್ರೀಧರ ಭಟ್, ಪ್ರಮುಖರಾದ ಈಳಿ ಶ್ರೀಧರ್ ಇದ್ದರು. ಮೇಘಾ ಪ್ರಾರ್ಥಿಸಿದರು. ಹು.ಭಾ.ಅಶೋಕ್ ಸ್ವಾಗತಿಸಿದರು. ಶ್ರೀಧರ ಭಟ್ ವಂದಿಸಿದರು. ವಿಷ್ಣುಮೂರ್ತಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>