ಉದ್ಯೋಗ ಮತ್ತು ವಿನಿಮಯ ಕಚೇರಿ ನಿವೃತ್ತ ಉಪ ನಿರ್ದೇಶಕ ಕೆ.ಜಿ. ಶ್ರೀನಿವಾಸ ಮೂರ್ತಿ ಅವರು ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಿದ್ದ ಮನೆ ಈಗ ರಸ್ತೆ ಮಟ್ಟದಿಂದ 5 ಅಡಿ ಕೆಳಗಿತ್ತು. ಪ್ರತಿ ವರ್ಷ ಮಳೆಗಾಲದಲ್ಲೂ ಮನೆಗೆ ನೀರು ನುಗ್ಗುತ್ತಿತ್ತು. ಶ್ರೀನಿವಾಸ ಮೂರ್ತಿ ಅವರ ಪುತ್ರ, ಭದ್ರಾವತಿ ಕಾಲೇಜಿನ ಸಹ ಪ್ರಾಧ್ಯಾಪಕ ಕೆ.ಎಸ್. ಮಂಜುನಾಥ್ ಅವರು ತಂದೆ ಕಟ್ಟಿದ ಪ್ರೀತಿಯ ಮನೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳಬೇಕು ಎಂದು ಬಿಹಾರ ಮೂಲದ ಶ್ರೀರಾಮ್ ಸಂಸ್ಥೆಯನ್ನು ಸಂಪರ್ಕಿಸಿದ್ದರು. ಆ ಸಂಸ್ಥೆಯ ತಂತ್ರಜ್ಞರು ಒಂದು ತಿಂಗಳಿನಿಂದ ಮನೆಯನ್ನು ಹಂತ ಹಂತವಾಗಿ ಮೇಲೆತ್ತುತ್ತಿದ್ದಾರೆ.