<p><strong>ಶಿವಮೊಗ್ಗ:</strong> ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಶಿವಮೊಗ್ಗ ನಗರದಲ್ಲಿ ನೀರಿಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ದಿನದ ಹಿಂದೆ ನಡೆದ ಕೋಮು ಗಲಭೆ ಮತ್ತು ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಸಂಘಟನೆಗಳು ಬಂದ್ ಮಾಡಲು ಮುಂದೆ ಬಂದಿಲ್ಲ.</p>.<p>ಶಿವಮೊಗ್ಗದಲ್ಲಿ ಪರಿಸ್ಥಿತಿ ಹೇಗಿದೆ?: ಎರಡು ದಿನಗಳ ಹಿಂದೆ ನಡೆದ ಕೋಮು ಗಲಭೆಯಿಂದಾಗಿ ನಗರದಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಶನಿವಾರ ಬೆಳಿಗ್ಗೆ 10ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿತ್ತು.</p>.<p>ನಿಷೇಧಾಜ್ಞೆಯನ್ನು ಇನ್ನೂ ವಿಸ್ತರಣೆ ಮಾಡದಿರುವುದರಿಂದ ಜನರು ಆತಂಕ ಬದಿಗಿಟ್ಟು ಮನೆಯಿಂದ ಹೊರ ಬರುತ್ತಿದ್ದಾರೆ. ಎಂದಿನಂತೆ ತಮ್ಮ ಕೆಲಸದಲ್ಲಿ ತೊಡಿಗಿಸಿಕೊಳ್ಳುತ್ತಿದ್ದಾರೆ.</p>.<p>ಹಾಲು, ದಿನಸಿ, ತರಕಾರಿ ಸೇರಿ ಅಗತ್ಯ ವಸ್ತುಗಳ ಖರೀದಿ, ವಾಕಿಂಗ್, ಜಾಗಿಂಗ್ಗೆ ಜನರು ರಸ್ತೆಗಿಳಿದಿದ್ದಾರೆ. ಎರಡು ದಿನದಿಂದ ಸ್ಥಗಿತವಾಗಿದ್ದ ಖಾಸಗಿ ಬಸ್ ಸಂಚಾರ ಪುನಾರಂಭವಾಗಿದ್ದು, ದೂರದ ಊರಿಗೆ ತೆರಳಲು ಜನರು ಬಸ್ ನಿಲ್ದಾಣಕ್ಕೆ ಬರುತ್ತಿದ್ದಾರೆ.<br />ಕೆಎಸ್ಆರ್ಟಿಸಿ ಬಸ್ ಸಂಚಾರವು ಸಾಮಾನ್ಯ ಸ್ಥಿತಿಗೆ ಬಂದಿದೆ.</p>.<p>ಆಟೋ ಸಂಚಾರವು ಪುನಾರಂಭವಾಗಿದೆ. ಬಸ್ ನಿಲ್ದಾಣ, ಬಿ.ಎಚ್.ರಸ್ತೆ ಸೇರಿದಂತೆ ನಗರದಾದ್ಯಂತ ಆಟೋಗಳು ಸಂಚರಿಸುತ್ತಿವೆ. ಶಿವಮೊಗ್ಗ ನಗರದಾದ್ಯಂತ ವಾಹನ ಸಂಚಾರ ಎಂದಿನಂತೆ ಇದೆ. ಅಂಗಡಿಗಳ ಬಾಗಿಲು ತೆಗೆಯಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಶಿವಮೊಗ್ಗ ನಗರದಲ್ಲಿ ನೀರಿಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ದಿನದ ಹಿಂದೆ ನಡೆದ ಕೋಮು ಗಲಭೆ ಮತ್ತು ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಸಂಘಟನೆಗಳು ಬಂದ್ ಮಾಡಲು ಮುಂದೆ ಬಂದಿಲ್ಲ.</p>.<p>ಶಿವಮೊಗ್ಗದಲ್ಲಿ ಪರಿಸ್ಥಿತಿ ಹೇಗಿದೆ?: ಎರಡು ದಿನಗಳ ಹಿಂದೆ ನಡೆದ ಕೋಮು ಗಲಭೆಯಿಂದಾಗಿ ನಗರದಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಶನಿವಾರ ಬೆಳಿಗ್ಗೆ 10ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿತ್ತು.</p>.<p>ನಿಷೇಧಾಜ್ಞೆಯನ್ನು ಇನ್ನೂ ವಿಸ್ತರಣೆ ಮಾಡದಿರುವುದರಿಂದ ಜನರು ಆತಂಕ ಬದಿಗಿಟ್ಟು ಮನೆಯಿಂದ ಹೊರ ಬರುತ್ತಿದ್ದಾರೆ. ಎಂದಿನಂತೆ ತಮ್ಮ ಕೆಲಸದಲ್ಲಿ ತೊಡಿಗಿಸಿಕೊಳ್ಳುತ್ತಿದ್ದಾರೆ.</p>.<p>ಹಾಲು, ದಿನಸಿ, ತರಕಾರಿ ಸೇರಿ ಅಗತ್ಯ ವಸ್ತುಗಳ ಖರೀದಿ, ವಾಕಿಂಗ್, ಜಾಗಿಂಗ್ಗೆ ಜನರು ರಸ್ತೆಗಿಳಿದಿದ್ದಾರೆ. ಎರಡು ದಿನದಿಂದ ಸ್ಥಗಿತವಾಗಿದ್ದ ಖಾಸಗಿ ಬಸ್ ಸಂಚಾರ ಪುನಾರಂಭವಾಗಿದ್ದು, ದೂರದ ಊರಿಗೆ ತೆರಳಲು ಜನರು ಬಸ್ ನಿಲ್ದಾಣಕ್ಕೆ ಬರುತ್ತಿದ್ದಾರೆ.<br />ಕೆಎಸ್ಆರ್ಟಿಸಿ ಬಸ್ ಸಂಚಾರವು ಸಾಮಾನ್ಯ ಸ್ಥಿತಿಗೆ ಬಂದಿದೆ.</p>.<p>ಆಟೋ ಸಂಚಾರವು ಪುನಾರಂಭವಾಗಿದೆ. ಬಸ್ ನಿಲ್ದಾಣ, ಬಿ.ಎಚ್.ರಸ್ತೆ ಸೇರಿದಂತೆ ನಗರದಾದ್ಯಂತ ಆಟೋಗಳು ಸಂಚರಿಸುತ್ತಿವೆ. ಶಿವಮೊಗ್ಗ ನಗರದಾದ್ಯಂತ ವಾಹನ ಸಂಚಾರ ಎಂದಿನಂತೆ ಇದೆ. ಅಂಗಡಿಗಳ ಬಾಗಿಲು ತೆಗೆಯಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>