<p><strong>ತುಮರಿ</strong>: ಶರಾವತಿ ಎಡದಂಡೆಯ ಕರೂರು ಹೋಬಳಿಯ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಗಾರು– ಸಿಗ್ಗಲು ಲಾಂಚ್ ಕಳೆದ ನಾಲ್ಕು ತಿಂಗಳಿಂದ ಶರಾವತಿ ಹಿನ್ನೀರಿನ ಮಧ್ಯೆ ಕೆಟ್ಟು ನಿಂತು ಅವ್ಯವಸ್ಥೆ ಉಂಟಾಗಿದೆ.</p>.<p>ಚನ್ನಗೊಂಡ ಗ್ರಾಮ ಪಂಚಾಯಿತಿಗೆ ಸಂಪರ್ಕ ಕಲ್ಪಿಸಲು ಸಿಗ್ಗಲು, ಚಂಬಳಿ ಮುಂತಾದ ಗ್ರಾಮಗಳಿಗೆ ಶರಾವತಿ ಹಿನ್ನೀರಿನ ಮಾರ್ಗದಲ್ಲಿ ಸೇವೆಗೆ ನೀಡಿದ್ದ ಲಾಂಚ್ ಮುಳುಗಿ ಹೋಗಿ ನಾಲ್ಕು ತಿಂಗಳು ಕಳೆದಿವೆ.</p>.<p>ತಮ್ಮ ಪಂಚಾಯಿತಿ ಕೇಂದ್ರ ಮತ್ತು ಬ್ಯಾಂಕ್, ಪಡಿತರ, ವ್ಯಾಪಾರ ವಹಿವಾಟು ಸೇವೆಗೆ ನದಿ ದಾಟಿ ಹೋಗಲು ಲಾಂಚ್ ನೀಡಿ ಎಂದು ಈ ಗ್ರಾಮಸ್ಥರು 2018ರಲ್ಲಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದರು. ಸ್ಥಳಕ್ಕೆ ಬಂದ ಉಪ ವಿಭಾಗಾಧಿಕಾರಿ ಭರವಸೆ ನೀಡಿ ಗ್ರಾಮಸ್ಥರ ಮನವೊಲಿಸಿದ್ದರು.</p>.<p>ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಗಮನಕ್ಕೆ ತಂದು ಮನವಿ ಮಾಡಿಕೊಂಡಿದ್ದರು. ಶಾಸಕರು ಒಳನಾಡು ಜಲಸಾರಿಗೆ ಇಲಾಖೆಯ ಹಸಿರುಮಕ್ಕಿ ಮಾರ್ಗದ ಹಳೆ ಲಾಂಚ್ ಅನ್ನು ಇಲ್ಲಿಗೆ ವರ್ಗಾಯಿಸಿ ಚನ್ನಗೊಂಡ ಗ್ರಾಮ ಪಂಚಾಯಿತಿ ಉಸ್ತುವಾರಿ ನೋಡಿಕೊಳ್ಳುವಂತೆ ವ್ಯವಸ್ಥೆ ಮಾಡಿ ಕಳೆದ ಬೇಸಿಗೆಯಲ್ಲಿ ಉದ್ಘಾಟಿಸಿದ್ದರು.</p>.<p>ಮೂರು ತಿಂಗಳು ಸೇವೆ ನೀಡಿದ ಲಾಂಚ್ ಸಮರ್ಪಕ ನಿರ್ವಹಣೆ ಇಲ್ಲದೇ, ಸ್ಥಗಿತಗೊಂಡಿದೆ.</p>.<p>ಒಳನಾಡು ಜಲಸಾರಿಗೆ ಇಲಾಖೆ ಒಡೆತನದ ಈ ಲಾಂಚ್ ಬೆಲೆ ₹25 ಲಕ್ಷಕ್ಕೂ ಹೆಚ್ಚು ಇದ್ದು, ಪಂಚಾಯತ್ ರಾಜ್ ಇಲಾಖೆಗೆ ಅದನ್ನು ಹಸ್ತಾಂತರ ಮಾಡಿ ಇಲಾಖೆ ತನ್ನ ಜವಾಬ್ದಾರಿ ಕಳಚಿಕೊಂಡಿದೆ. ಈಗ ಚನ್ನಗೊಂಡ ಗ್ರಾಮ ಪಂಚಾಯಿತಿ ನಿರ್ವಹಣೆಯಲ್ಲಿ ಇದೆ.</p>.<p>ಜನರ ಸೇವೆಗೆ ಸಿಗದ ಈ ಕಡವು(ಲಾಂಚ್) ಹಾಗೂ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.</p>.<p><strong><em>ಈ ಲಾಂಚ್ ಚನ್ನಗೊಂಡ ಗ್ರಾಮ ಪಂಚಯಿತಿಗೆ ಕೊಡಲಾಗಿತ್ತು. ಗ್ರಾಮ ಪಂಚಾಯಿತಿಯವರು ಇದರ ತಾಂತ್ರಿಕ ನಿರ್ವಹಣೆ ಮಾಡಬೇಕಾಗಿತ್ತು. ಸರಿಯಾಗಿ ನಿರ್ವಹಿಸದ ಕಾರಣ ಈ ಲಾಂಚ್ ಸ್ಥಗಿತಗೊಂಡಿದೆ.</em></strong></p>.<p><strong><em>ಧನೇಂದ್ರ, ಕಡವು ನಿರೀಕ್ಷಕ, ಸಾಗರ</em></strong></p>.<p><strong><em>ಕೆಸರಿನಲ್ಲಿ ನಿಂತಿರುವ ಲಾಂಚ್ ಹೊರತೆಗೆಯಲು ಹಲವು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಎರಡು ಎಂಜಿನ್ ಹೊಂದಿರುವ ಲಾಂಚ್ ನಿರ್ವಹಣೆ ದುಬಾರಿ ವೆಚ್ಚವಾಗಿದ್ದು, ನಿರ್ವಹಣೆ ಅಸಾಧ್ಯದ ಬಗ್ಗೆ ಇಲಾಖೆಗೆ ಹಾಗೂ ಶಾಸಕರಿಗೆ ಹಲವು ಬಾರಿ ಮನವಿ ಮಾಡಲಾಗಿದೆ.</em></strong></p>.<p><strong><em>ಪದ್ಮರಾಜ, ಚನ್ನಗೊಂಡ ಗ್ರಾಮ ಪಂಚಾಯಿತಿ ಅಧ್ಯಕ್ಷ.</em></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮರಿ</strong>: ಶರಾವತಿ ಎಡದಂಡೆಯ ಕರೂರು ಹೋಬಳಿಯ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಗಾರು– ಸಿಗ್ಗಲು ಲಾಂಚ್ ಕಳೆದ ನಾಲ್ಕು ತಿಂಗಳಿಂದ ಶರಾವತಿ ಹಿನ್ನೀರಿನ ಮಧ್ಯೆ ಕೆಟ್ಟು ನಿಂತು ಅವ್ಯವಸ್ಥೆ ಉಂಟಾಗಿದೆ.</p>.<p>ಚನ್ನಗೊಂಡ ಗ್ರಾಮ ಪಂಚಾಯಿತಿಗೆ ಸಂಪರ್ಕ ಕಲ್ಪಿಸಲು ಸಿಗ್ಗಲು, ಚಂಬಳಿ ಮುಂತಾದ ಗ್ರಾಮಗಳಿಗೆ ಶರಾವತಿ ಹಿನ್ನೀರಿನ ಮಾರ್ಗದಲ್ಲಿ ಸೇವೆಗೆ ನೀಡಿದ್ದ ಲಾಂಚ್ ಮುಳುಗಿ ಹೋಗಿ ನಾಲ್ಕು ತಿಂಗಳು ಕಳೆದಿವೆ.</p>.<p>ತಮ್ಮ ಪಂಚಾಯಿತಿ ಕೇಂದ್ರ ಮತ್ತು ಬ್ಯಾಂಕ್, ಪಡಿತರ, ವ್ಯಾಪಾರ ವಹಿವಾಟು ಸೇವೆಗೆ ನದಿ ದಾಟಿ ಹೋಗಲು ಲಾಂಚ್ ನೀಡಿ ಎಂದು ಈ ಗ್ರಾಮಸ್ಥರು 2018ರಲ್ಲಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದರು. ಸ್ಥಳಕ್ಕೆ ಬಂದ ಉಪ ವಿಭಾಗಾಧಿಕಾರಿ ಭರವಸೆ ನೀಡಿ ಗ್ರಾಮಸ್ಥರ ಮನವೊಲಿಸಿದ್ದರು.</p>.<p>ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಗಮನಕ್ಕೆ ತಂದು ಮನವಿ ಮಾಡಿಕೊಂಡಿದ್ದರು. ಶಾಸಕರು ಒಳನಾಡು ಜಲಸಾರಿಗೆ ಇಲಾಖೆಯ ಹಸಿರುಮಕ್ಕಿ ಮಾರ್ಗದ ಹಳೆ ಲಾಂಚ್ ಅನ್ನು ಇಲ್ಲಿಗೆ ವರ್ಗಾಯಿಸಿ ಚನ್ನಗೊಂಡ ಗ್ರಾಮ ಪಂಚಾಯಿತಿ ಉಸ್ತುವಾರಿ ನೋಡಿಕೊಳ್ಳುವಂತೆ ವ್ಯವಸ್ಥೆ ಮಾಡಿ ಕಳೆದ ಬೇಸಿಗೆಯಲ್ಲಿ ಉದ್ಘಾಟಿಸಿದ್ದರು.</p>.<p>ಮೂರು ತಿಂಗಳು ಸೇವೆ ನೀಡಿದ ಲಾಂಚ್ ಸಮರ್ಪಕ ನಿರ್ವಹಣೆ ಇಲ್ಲದೇ, ಸ್ಥಗಿತಗೊಂಡಿದೆ.</p>.<p>ಒಳನಾಡು ಜಲಸಾರಿಗೆ ಇಲಾಖೆ ಒಡೆತನದ ಈ ಲಾಂಚ್ ಬೆಲೆ ₹25 ಲಕ್ಷಕ್ಕೂ ಹೆಚ್ಚು ಇದ್ದು, ಪಂಚಾಯತ್ ರಾಜ್ ಇಲಾಖೆಗೆ ಅದನ್ನು ಹಸ್ತಾಂತರ ಮಾಡಿ ಇಲಾಖೆ ತನ್ನ ಜವಾಬ್ದಾರಿ ಕಳಚಿಕೊಂಡಿದೆ. ಈಗ ಚನ್ನಗೊಂಡ ಗ್ರಾಮ ಪಂಚಾಯಿತಿ ನಿರ್ವಹಣೆಯಲ್ಲಿ ಇದೆ.</p>.<p>ಜನರ ಸೇವೆಗೆ ಸಿಗದ ಈ ಕಡವು(ಲಾಂಚ್) ಹಾಗೂ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.</p>.<p><strong><em>ಈ ಲಾಂಚ್ ಚನ್ನಗೊಂಡ ಗ್ರಾಮ ಪಂಚಯಿತಿಗೆ ಕೊಡಲಾಗಿತ್ತು. ಗ್ರಾಮ ಪಂಚಾಯಿತಿಯವರು ಇದರ ತಾಂತ್ರಿಕ ನಿರ್ವಹಣೆ ಮಾಡಬೇಕಾಗಿತ್ತು. ಸರಿಯಾಗಿ ನಿರ್ವಹಿಸದ ಕಾರಣ ಈ ಲಾಂಚ್ ಸ್ಥಗಿತಗೊಂಡಿದೆ.</em></strong></p>.<p><strong><em>ಧನೇಂದ್ರ, ಕಡವು ನಿರೀಕ್ಷಕ, ಸಾಗರ</em></strong></p>.<p><strong><em>ಕೆಸರಿನಲ್ಲಿ ನಿಂತಿರುವ ಲಾಂಚ್ ಹೊರತೆಗೆಯಲು ಹಲವು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಎರಡು ಎಂಜಿನ್ ಹೊಂದಿರುವ ಲಾಂಚ್ ನಿರ್ವಹಣೆ ದುಬಾರಿ ವೆಚ್ಚವಾಗಿದ್ದು, ನಿರ್ವಹಣೆ ಅಸಾಧ್ಯದ ಬಗ್ಗೆ ಇಲಾಖೆಗೆ ಹಾಗೂ ಶಾಸಕರಿಗೆ ಹಲವು ಬಾರಿ ಮನವಿ ಮಾಡಲಾಗಿದೆ.</em></strong></p>.<p><strong><em>ಪದ್ಮರಾಜ, ಚನ್ನಗೊಂಡ ಗ್ರಾಮ ಪಂಚಾಯಿತಿ ಅಧ್ಯಕ್ಷ.</em></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>