ಆರೈಕೆ ಕೇಂದ್ರ ಗ್ರಾಮಾಂತರ ಪ್ರದೇಶದಲ್ಲಿದ್ದು, ಪದೇ ಪದೇ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ. ಆದರೆ ಪರ್ಯಾಯವಾಗಿ ಜನರೇಟರ್ ವ್ಯವಸ್ಥೆ ಇದ್ದರೂ ಅದಕ್ಕೆ ಡೀಸೆಲ್ ಪೂರೈಸುತ್ತಿಲ್ಲ. ಕೋವಿಡ್ನಿಂದ ಗುಣಮುಖರಾದ ರೋಗಿಗಳನ್ನು ಅವರ ಮನೆಗಳಿಗೆ ತಲುಪಿಸಲು ವಾಹನದ ವ್ಯವಸ್ಥೆ ಇಲ್ಲ. ತಾಲ್ಲೂಕಿನಲ್ಲಿ ಕೋವಿಡ್ ಸಾವಿನ ಅನುಪಾತದ ಪ್ರಮಾಣ ಶೇ 4.77 ತಲುಪಿದೆ. ಹೀಗಾಗಿ ಕೋವಿಡ್ ಆರೈಕೆ ಕೇಂದ್ರದಲ್ಲಿನ ಅವ್ಯವಸ್ಥೆಗೆ ಕಾರಣರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಪತ್ರದಲ್ಲಿ ಕೋರಿದ್ದಾರೆ.