ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ: ಕಾಣಿಕೆ ಹುಂಡಿ ಒಡೆದು ಕಳವು

Last Updated 27 ನವೆಂಬರ್ 2022, 2:57 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕೆಳದಿ ಗ್ರಾಮದ ರಾಮೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ನಾಲ್ಕು ಹುಂಡಿಗಳನ್ನು ಒಡೆದು ಕಾಣಿಕೆ ಹಣವನ್ನು ಕಳವು ಮಾಡಲಾಗಿದೆ.

ಒಡೆದ ಹುಂಡಿಯನ್ನು ಕಳ್ಳರು ದೇವಸ್ಥಾನದ ಹಿಂಭಾಗದಲ್ಲಿ ಎಸೆದು ಹೋಗಿದ್ದಾರೆ. ಎರಡು ದಿನಗಳ ಹಿಂದೆ ಕಾರ್ತಿಕ ದೀಪೋತ್ಸವ ನಡೆದಿದ್ದು, ಭಕ್ತರಿಂದ ದೊಡ್ಡ ಮೊತ್ತದ ಕಾಣಿಕೆ ಸಂಗ್ರಹವಾಗಿದ್ದು ಅದನ್ನು ಗಮನಿಸಿಯೇ ಕಳ್ಳರು ಹುಂಡಿ ಒಡೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮುಜರಾಯಿ ಇಲಾಖೆಗೆ ಸೇರಿರುವ ಈ ದೇವಸ್ಥಾನದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಒತ್ತಾಯಿಸಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT