<p><strong>ಸಾಗರ:</strong> ‘ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಸಹ್ಯಾದ್ರಿ ಮಾರಾಟ ಕೇಂದ್ರದಲ್ಲಿ ದೊರೆಯುವ ಎಲ್ಲ ಉತ್ಪನ್ನಗಳು ವಿಶ್ವವಿದ್ಯಾಲಯದ ರೈತ ತರಬೇತಿ ಕೇಂದ್ರದಲ್ಲಿ ಸಿಗುವ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿ ಇಲ್ಲಿನ ರೈತ ಸಂಘದ ಪ್ರಮುಖರು ಗುರುವಾರ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.</p>.<p>‘ತಾಲ್ಲೂಕಿನ ಇರುವಕ್ಕಿ ಗ್ರಾಮದಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ರೈತರಿಗೆ ಹಲವು ತರಬೇತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುತ್ತದೆ. ಆದ್ದರಿಂದ ಶಿವಮೊಗ್ಗದ ಕೇಂದ್ರದಲ್ಲಿ ಲಭ್ಯವಿರುವ ಕೃಷಿಕರಿಗೆ ಬೇಕಾಗುವ ಉತ್ಪನ್ನಗಳು ವಿಶ್ವವಿದ್ಯಾಲಯದ ಆವರಣದಲ್ಲೂ ದೊರಕುವ ವ್ಯವಸ್ಥೆ ಮಾಡಬೇಕು’ ಎಂದು ಕೋರಿದ್ದಾರೆ.</p>.<p>‘ಜಿಲ್ಲೆಯ ಎಲ್ಲೆಡೆ ಅಡಿಕೆಗೆ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗದ ಬಾಧೆ ಕಾಣಿಸಿಕೊಂಡಿದ್ದು, ಅವುಗಳ ಹತೋಟಿಗೆ ಯಾವ ಕ್ರಮ ಕೈಗೊಳ್ಳಬೇಕು, ಅವುಗಳನ್ನು ತಡೆಯಲು ಯಾವ ಸಂಶೋಧನೆ ನಡೆದಿದೆ ಎನ್ನುವ ಮಾಹಿತಿಯನ್ನು ರೈತರಿಗೆ ನಿರಂತರವಾಗಿ ತಲುಪಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ರೈತ ಸಂಘದ ಪ್ರಮುಖರಾದ ಎಂ.ಬಿ.ಮಂಜಪ್ಪ ಹಿರೇನೆಲ್ಲೂರು, ಅರುಣ್ ಕುಮಾರ್ ಕಸವೆ, ಹೊಯ್ಸಳ ಗಣಪತಿಯಪ್ಪ, ಚಂದ್ರಶೇಖರ ಗೂರ್ಲಕೆರೆ, ಕನ್ನಪ್ಪ ಹೊಸಕೊಪ್ಪ, ಗುರುಮೂರ್ತಿ, ದೇವು ಕಾನ್ಲೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ‘ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಸಹ್ಯಾದ್ರಿ ಮಾರಾಟ ಕೇಂದ್ರದಲ್ಲಿ ದೊರೆಯುವ ಎಲ್ಲ ಉತ್ಪನ್ನಗಳು ವಿಶ್ವವಿದ್ಯಾಲಯದ ರೈತ ತರಬೇತಿ ಕೇಂದ್ರದಲ್ಲಿ ಸಿಗುವ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿ ಇಲ್ಲಿನ ರೈತ ಸಂಘದ ಪ್ರಮುಖರು ಗುರುವಾರ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.</p>.<p>‘ತಾಲ್ಲೂಕಿನ ಇರುವಕ್ಕಿ ಗ್ರಾಮದಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ರೈತರಿಗೆ ಹಲವು ತರಬೇತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುತ್ತದೆ. ಆದ್ದರಿಂದ ಶಿವಮೊಗ್ಗದ ಕೇಂದ್ರದಲ್ಲಿ ಲಭ್ಯವಿರುವ ಕೃಷಿಕರಿಗೆ ಬೇಕಾಗುವ ಉತ್ಪನ್ನಗಳು ವಿಶ್ವವಿದ್ಯಾಲಯದ ಆವರಣದಲ್ಲೂ ದೊರಕುವ ವ್ಯವಸ್ಥೆ ಮಾಡಬೇಕು’ ಎಂದು ಕೋರಿದ್ದಾರೆ.</p>.<p>‘ಜಿಲ್ಲೆಯ ಎಲ್ಲೆಡೆ ಅಡಿಕೆಗೆ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗದ ಬಾಧೆ ಕಾಣಿಸಿಕೊಂಡಿದ್ದು, ಅವುಗಳ ಹತೋಟಿಗೆ ಯಾವ ಕ್ರಮ ಕೈಗೊಳ್ಳಬೇಕು, ಅವುಗಳನ್ನು ತಡೆಯಲು ಯಾವ ಸಂಶೋಧನೆ ನಡೆದಿದೆ ಎನ್ನುವ ಮಾಹಿತಿಯನ್ನು ರೈತರಿಗೆ ನಿರಂತರವಾಗಿ ತಲುಪಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ರೈತ ಸಂಘದ ಪ್ರಮುಖರಾದ ಎಂ.ಬಿ.ಮಂಜಪ್ಪ ಹಿರೇನೆಲ್ಲೂರು, ಅರುಣ್ ಕುಮಾರ್ ಕಸವೆ, ಹೊಯ್ಸಳ ಗಣಪತಿಯಪ್ಪ, ಚಂದ್ರಶೇಖರ ಗೂರ್ಲಕೆರೆ, ಕನ್ನಪ್ಪ ಹೊಸಕೊಪ್ಪ, ಗುರುಮೂರ್ತಿ, ದೇವು ಕಾನ್ಲೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>