ನಾಗವಳ್ಳಿ ಗ್ರಾಮದಿಂದ ಪರೀಕ್ಷಾ ಕೇಂದ್ರವು 50 ಕಿ.ಮೀ. ದೂರದಲ್ಲಿದ್ದು 16 ವಿದ್ಯಾರ್ಥಿಗಳನ್ನು ಕೆಎಸ್ಆರ್ಟಿಸಿ ಬಸ್ನಲ್ಲಿ ಕರೆತರಲಾಗುತ್ತಿತ್ತು. ಈ ವೇಳೆಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಯ ಮಧ್ಯೆಉರುಳಿ ಬಿದ್ದಿದೆ. ಬಸ್ ಚಾಲಕ, ಶಿಕ್ಷಣ ಇಲಾಖೆಯ ಮಾರ್ಗಾಧಿಕಾರಿ ತಕ್ಷಣ ಕಾರ್ಯಪ್ರವೃತ್ತರಾಗಿ ಗ್ರಾಮಸ್ಥರ ನೆರವಿನಿಂದ ರಸ್ತೆಯಿಂದ ಮರವನ್ನು ತೆರವುಗೊಳಿಸಿ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ.