ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥಹಳ್ಳಿ: ಮಹಾತ್ಮ ಗಾಂಧಿ, ಸರಸ್ವತಿ ಮೂರ್ತಿಗಳು ಧ್ವಂಸ

Last Updated 29 ಡಿಸೆಂಬರ್ 2021, 6:21 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಹಾರೋಗೊಳಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮಸ್ಥರು ನಿರ್ಮಿಸಿದ್ದ ಮಹಾತ್ಮ ಗಾಂಧೀಜಿ, ಸರಸ್ವತಿ ಮೂರ್ತಿಗಳನ್ನು ಭಾನುವಾರ ರಾತ್ರಿ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ.

ಗ್ರಾಮದಲ್ಲಿ ಅಡಿಕೆ ಆಯುವ ಕಾರ್ಮಿಕ ಗೋವಿಂದ ಎರಡು ದಿನಗಳ ಹಿಂದೆ ಶಾಲೆಯಲ್ಲಿ ನೀರು ಕೇಳಿದ್ದಾನೆ. ಆತನ ದುರವಸ್ಥೆ ನೋಡಿದ ಶಿಕ್ಷಕಿ ನೀರು ಕೊಡಲು ಹಿಂಜರಿದರು ಎನ್ನಲಾಗಿದೆ. ಸಿಟ್ಟಿಗೆದ್ದ ಆತ ಈ ಕೃತ್ಯ ಎಸಗಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಹಿರಿಯ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮೂರ್ತಿಗಳನ್ನು ಸ್ಥಾಪಿಸಿದ್ದರು. ಕೈತೋಟ, ಹೂವು, ತರಕಾರಿ, ತೆಂಗು- ಅಡಿಕೆ, ಗಿಡ-ಮರಗಳನ್ನು ಬೆಳೆಸಿ ನೀರಿನ ವ್ಯವಸ್ಥೆ ಕಲ್ಪಿಸಿದ್ದರು. ಎಲ್ಲವನ್ನೂ ಹಾಳುಗೆಡವಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT