ಆಪ್ಸ್ಕೋಸ್ ಸಂಸ್ಥೆಯ ಸಹಕಾರಿ ಕ್ಷೇತ್ರದ ನಿರ್ದೇಶಕರಾದ ಗುರುಪಾದ ಅವರು ಭೀಮನಕೋಣೆಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಪ್ರತಿನಿಧಿಯಾಗಿದ್ದರು. ಅವರು ಭೀಮನಕೋಣೆ ಕೃಷಿ ಬ್ಯಾಂಕಿಗೆ ಈಚೆಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರಿಂದ ಸಹಕಾರ ಕ್ಷೇತ್ರದ ತೆರವಾದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಸಲು ಆಡಳಿತ ಮಂಡಳಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಪ ನಿಬಂಧಕರು ಸೂಚಿಸಿದ್ದರು. ಅದನ್ನು ಪಾಲಿಸದೆ ಇರುವ ಕಾರಣ ಉಪ ನಿಬಂಧಕರು ಸ್ವಯಂ ಪ್ರಕರಣ ದಾಖಲಿಸಿಕೊಂಡು ಸಹಕಾರಿ ಕಾಯ್ದೆ ಅನ್ವಯ ಕ್ರಮ ಜರುಗಿಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.