<p><strong>ಸಾಗರ: </strong>ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕರು ನಿರ್ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿರುವುದು ನ್ಯಾಯಕ್ಕೆ ಸಿಕ್ಕಿರುವ ಗೆಲುವು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.</p>.<p>ಬುಧವಾರ ಸಾಗರ್ ಹೋಟೆಲ್ ವೃತ್ತದಲ್ಲಿ ಬಿಜೆಪಿ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ ಕೊಳೆಯನ್ನು ಸಂಪೂರ್ಣವಾಗಿ ತೊಳೆಯುವ ಮೂಲಕ ಉತ್ತಮ ಆಡಳಿತ ನೀಡುವ ಸಂಕಲ್ಪವನ್ನು ಬಿಜೆಪಿ ಮಾಡಿದೆ ಎಂದು ಹೇಳಿದರು.</p>.<p>ಶಾಸಕ ಎಚ್.ಹಾಲಪ್ಪ ಹರತಾಳು ಅವರು ಆರೋಗ್ಯವಾಗಿದ್ದಾರೆ. ವಿಧಾನಸಭೆಯ ಅಧಿವೇಶನದಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಆದಾಗ್ಯೂ ಕೆಲವು ವಿಕೃತ ಮನಸ್ಸಿನವರು ಹಾಲಪ್ಪ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ.<br />ವಿರೋಧ ಪಕ್ಷದವರು ರಚನಾತ್ಮಕವಾಗಿ ಕೆಲಸ ಮಾಡಬೇಕೇ ಹೊರತು ಇಂತಹ ಕ್ಷುಲ್ಲಕ ಕೆಲಸಕ್ಕೆ ಮುಂದಾಗಬಾರದು ಎಂದು ಟೀಕಿಸಿದರು.</p>.<p>ಬಿಜೆಪಿಯ ಪ್ರಮುಖರಾದ ಕೆ.ಆರ್. ಗಣೇಶ್ ಪ್ರಸಾದ್, ಸಂತೋಷ್ ಶೇಟ್, ವಿ. ಮಹೇಶ್, ಸತೀಶ್ ಮೊಗವೀರ, ಚೇತನ್ ರಾಜ್ ಕಣ್ಣೂರ್, ದೇವೇಂದ್ರಪ್ಪ ಯಲಕುಂದ್ಲಿ, ಗೌತಮ್, ಮೈತ್ರಿ ಪಾಟೀಲ್, ಮಧುರಾ ಶಿವಾನಂದ್, ಪ್ರೇಮಾ ಕಿರಣ್ ಸಿಂಗ್, ಭಾವನಾ ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕರು ನಿರ್ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿರುವುದು ನ್ಯಾಯಕ್ಕೆ ಸಿಕ್ಕಿರುವ ಗೆಲುವು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.</p>.<p>ಬುಧವಾರ ಸಾಗರ್ ಹೋಟೆಲ್ ವೃತ್ತದಲ್ಲಿ ಬಿಜೆಪಿ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ ಕೊಳೆಯನ್ನು ಸಂಪೂರ್ಣವಾಗಿ ತೊಳೆಯುವ ಮೂಲಕ ಉತ್ತಮ ಆಡಳಿತ ನೀಡುವ ಸಂಕಲ್ಪವನ್ನು ಬಿಜೆಪಿ ಮಾಡಿದೆ ಎಂದು ಹೇಳಿದರು.</p>.<p>ಶಾಸಕ ಎಚ್.ಹಾಲಪ್ಪ ಹರತಾಳು ಅವರು ಆರೋಗ್ಯವಾಗಿದ್ದಾರೆ. ವಿಧಾನಸಭೆಯ ಅಧಿವೇಶನದಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಆದಾಗ್ಯೂ ಕೆಲವು ವಿಕೃತ ಮನಸ್ಸಿನವರು ಹಾಲಪ್ಪ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ.<br />ವಿರೋಧ ಪಕ್ಷದವರು ರಚನಾತ್ಮಕವಾಗಿ ಕೆಲಸ ಮಾಡಬೇಕೇ ಹೊರತು ಇಂತಹ ಕ್ಷುಲ್ಲಕ ಕೆಲಸಕ್ಕೆ ಮುಂದಾಗಬಾರದು ಎಂದು ಟೀಕಿಸಿದರು.</p>.<p>ಬಿಜೆಪಿಯ ಪ್ರಮುಖರಾದ ಕೆ.ಆರ್. ಗಣೇಶ್ ಪ್ರಸಾದ್, ಸಂತೋಷ್ ಶೇಟ್, ವಿ. ಮಹೇಶ್, ಸತೀಶ್ ಮೊಗವೀರ, ಚೇತನ್ ರಾಜ್ ಕಣ್ಣೂರ್, ದೇವೇಂದ್ರಪ್ಪ ಯಲಕುಂದ್ಲಿ, ಗೌತಮ್, ಮೈತ್ರಿ ಪಾಟೀಲ್, ಮಧುರಾ ಶಿವಾನಂದ್, ಪ್ರೇಮಾ ಕಿರಣ್ ಸಿಂಗ್, ಭಾವನಾ ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>