ಶುಕ್ರವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ತುಮರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ, ‘ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೇ ಕಾಮಗಾರಿ ಕೈಗೊಂಡಿರುವುದರಿಂದ ಈ ಭಾಗದ ಹಲವು ಗ್ರಾಮಗಳಿಗೆ ಸಂಪರ್ಕ ವ್ಯವಸ್ಥೆ ಸ್ಥಗಿತಗೊಂಡಿದೆ. ಕಿರುವಾಸೆ, ಬ್ರಾಹ್ಮಣ ಕೆಪ್ಪಿಗೆ, ಅರಬಳ್ಳಿ, ನಾಡಕೆಪ್ಪಿಗೆ, ಜಡ್ಡಿನಬೈಲು, ಬೆದರಕೊಪ್ಪ ಮುಂತಾದ ಗ್ರಾಮಗಳ ಮೂರು ಸಾವಿರಕ್ಕೂ ಹೆಚ್ಚು ಜನರಿಗೆ ಇದರಿಂದ ತೊಂದರೆಯಾಗಿದೆ’ ಎಂದು ದೂರಿದರು.