<p><strong>ಸಾಗರ:</strong> ತಾಲ್ಲೂಕಿನ ತುಮರಿ-ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ಮುಖ್ಯರಸ್ತೆಯಲ್ಲಿ ಕಿರು ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಶುಕ್ರವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ತುಮರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ, ‘ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೇ ಕಾಮಗಾರಿ ಕೈಗೊಂಡಿರುವುದರಿಂದ ಈ ಭಾಗದ ಹಲವು ಗ್ರಾಮಗಳಿಗೆ ಸಂಪರ್ಕ ವ್ಯವಸ್ಥೆ ಸ್ಥಗಿತಗೊಂಡಿದೆ. ಕಿರುವಾಸೆ, ಬ್ರಾಹ್ಮಣ ಕೆಪ್ಪಿಗೆ, ಅರಬಳ್ಳಿ, ನಾಡಕೆಪ್ಪಿಗೆ, ಜಡ್ಡಿನಬೈಲು, ಬೆದರಕೊಪ್ಪ ಮುಂತಾದ ಗ್ರಾಮಗಳ ಮೂರು ಸಾವಿರಕ್ಕೂ ಹೆಚ್ಚು ಜನರಿಗೆ ಇದರಿಂದ ತೊಂದರೆಯಾಗಿದೆ’ ಎಂದು ದೂರಿದರು.</p>.<p>ಕಾಮಗಾರಿ ನಡೆಯುತ್ತಿರುವ ಪಕ್ಕದಲ್ಲಿ ಕಚ್ಚಾ ರಸ್ತೆಯ ಮೂಲಕ ಸಂಚರಿಸಲು ಹೊರಟಿದ್ದ ಬಸ್ ಕೆಸರಿನಲ್ಲಿ ಸಿಲುಕಿ ಪ್ರಯಾಣಿಕರು ಪರದಾಡುವಂತಾಗಿದೆ. ಅಧಿಕಾರಿಗಳ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಅವರು ಆರೋಪಿಸಿದರು.</p>.<p>ಅರಬಳ್ಳಿಯ ಹಿರಿಯ ನಾಗರಿಕ ಗೋಪಾಲಕೃಷ್ಣ ಭಟ್, ‘ಬದಲಿ ರಸ್ತೆಯ ವ್ಯವಸ್ಥೆ ಮಾಡಿಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಕ್ರಮ ಅವೈಜ್ಞಾನಿಕ. ಜನರಿಗೆ ತೊಂದರೆಯಾಗುತ್ತದೆ ಎನ್ನುವುದು ಗೊತ್ತಿದ್ದರೂ ಅಧಿಕಾರಿಗಳು ಉಪೇಕ್ಷೆ ಮಾಡುವುದು ಜನತಂತ್ರ ವಿರೋಧಿ ನೀತಿ’ ಎಂದು ಟೀಕಿಸಿದರು.</p>.<p>ಪ್ರಮುಖರಾದ ಸುರೇಶ್, ರವಿ ಮೇಸ್ತ್ರಿ, ಕೃಷ್ಣ, ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ತಾಲ್ಲೂಕಿನ ತುಮರಿ-ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ಮುಖ್ಯರಸ್ತೆಯಲ್ಲಿ ಕಿರು ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಶುಕ್ರವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ತುಮರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ, ‘ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೇ ಕಾಮಗಾರಿ ಕೈಗೊಂಡಿರುವುದರಿಂದ ಈ ಭಾಗದ ಹಲವು ಗ್ರಾಮಗಳಿಗೆ ಸಂಪರ್ಕ ವ್ಯವಸ್ಥೆ ಸ್ಥಗಿತಗೊಂಡಿದೆ. ಕಿರುವಾಸೆ, ಬ್ರಾಹ್ಮಣ ಕೆಪ್ಪಿಗೆ, ಅರಬಳ್ಳಿ, ನಾಡಕೆಪ್ಪಿಗೆ, ಜಡ್ಡಿನಬೈಲು, ಬೆದರಕೊಪ್ಪ ಮುಂತಾದ ಗ್ರಾಮಗಳ ಮೂರು ಸಾವಿರಕ್ಕೂ ಹೆಚ್ಚು ಜನರಿಗೆ ಇದರಿಂದ ತೊಂದರೆಯಾಗಿದೆ’ ಎಂದು ದೂರಿದರು.</p>.<p>ಕಾಮಗಾರಿ ನಡೆಯುತ್ತಿರುವ ಪಕ್ಕದಲ್ಲಿ ಕಚ್ಚಾ ರಸ್ತೆಯ ಮೂಲಕ ಸಂಚರಿಸಲು ಹೊರಟಿದ್ದ ಬಸ್ ಕೆಸರಿನಲ್ಲಿ ಸಿಲುಕಿ ಪ್ರಯಾಣಿಕರು ಪರದಾಡುವಂತಾಗಿದೆ. ಅಧಿಕಾರಿಗಳ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಅವರು ಆರೋಪಿಸಿದರು.</p>.<p>ಅರಬಳ್ಳಿಯ ಹಿರಿಯ ನಾಗರಿಕ ಗೋಪಾಲಕೃಷ್ಣ ಭಟ್, ‘ಬದಲಿ ರಸ್ತೆಯ ವ್ಯವಸ್ಥೆ ಮಾಡಿಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಕ್ರಮ ಅವೈಜ್ಞಾನಿಕ. ಜನರಿಗೆ ತೊಂದರೆಯಾಗುತ್ತದೆ ಎನ್ನುವುದು ಗೊತ್ತಿದ್ದರೂ ಅಧಿಕಾರಿಗಳು ಉಪೇಕ್ಷೆ ಮಾಡುವುದು ಜನತಂತ್ರ ವಿರೋಧಿ ನೀತಿ’ ಎಂದು ಟೀಕಿಸಿದರು.</p>.<p>ಪ್ರಮುಖರಾದ ಸುರೇಶ್, ರವಿ ಮೇಸ್ತ್ರಿ, ಕೃಷ್ಣ, ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>