<p><strong>ತೀರ್ಥಹಳ್ಳಿ:</strong> ‘ಗ್ರಾಮ ಪಂಚಾಯಿತಿಗಳು ಕೂಸಿನಮನೆ ನಿರ್ಮಿಸಬೇಕು ಎಂಬ ಆದೇಶ ಅವೈಜ್ಞಾನಿಕವಾಗಿದೆ. ಅದನ್ನು ಖಂಡಿಸಿ ರಾಜ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಒಕ್ಕೂಟದಿಂದ ಫೆಬ್ರುವರಿ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಒಕ್ಕೂಟದ ಉಪಾಧ್ಯಕ್ಷ ಯು.ಡಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವ ಮಹಿಳೆಯರ 6 ತಿಂಗಳಿನಿಂದ 3 ವರ್ಷದೊಳಗಿನ ಮಕ್ಕಳ ಲಾಲನೆ– ಪಾಲನೆ ಮಾಡುವ ಉದ್ದೇಶದಿಂದ ಕೂಸಿನಮನೆ ಅಥವಾ ಶಿಶುಪಾಲನಾ ಕೇಂದ್ರ ಸ್ಥಾಪನೆ ಉದ್ದೇಶ ಸ್ವಾಗತಾರ್ಹ. ಆದರೆ, ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಕೂಸಿನ ಮನೆ ನಿರ್ಮಿಸಿದರೆ ಯೋಜನೆ ಸದುಪಯೋಗ ಆಗುವುದಿಲ್ಲ. ಇದು ಪಂಚಾಯಿತಿಗೆ ಹೊರೆಯಾಗಲಿದೆ’ ಎಂದು ಹೇಳಿದ್ದಾರೆ.</p>.<p>‘ಪಂಚಾಯಿತಿ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ನರೇಗಾ ಯೋಜನೆ ಕಾಮಗಾರಿ ನಡೆಯುತ್ತಿರುತ್ತದೆ. ಎಲ್ಲ ಮಕ್ಕಳನ್ನೂ ಒಂದೇ ಕೂಸಿನಮನೆಯಲ್ಲಿ ತಂದು ಬಿಡುವುದು ಅಸಾಧ್ಯ. ಅಲ್ಲದೇ ವರ್ಗ– 1ರಲ್ಲಿ ಹಣವೇ ಇಲ್ಲ. ಆದಗ್ಯೂ ರಾಜ್ಯದಲ್ಲಿ 4000 ಕೂಸಿನ ಮನೆಯನ್ನು ಪ್ರಾರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ. 6 ತಿಂಗಳಿನಿಂದ 3 ವರ್ಷದೊಳಗಿನ ಮಕ್ಕಳ ಲಾಲನೆ, ಪಾಲನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ವಹಿಸುತ್ತಿದೆ. ಆ ಇಲಾಖೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಸದೃಢಗೊಳಿಸುವುದು ಸೂಕ್ತ. ಪ್ರತಿ ಗ್ರಾಮಗಳಲ್ಲೂ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಅದು ಸಹ ಕೂಸಿನ ಮನೆಯ ಕಲ್ಪನೆಯೇ ಆಗಿರುವುದರಿಂದ ಇಂತಹ ಅವೈಜ್ಞಾನಿಕ ಯೋಜನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ:</strong> ‘ಗ್ರಾಮ ಪಂಚಾಯಿತಿಗಳು ಕೂಸಿನಮನೆ ನಿರ್ಮಿಸಬೇಕು ಎಂಬ ಆದೇಶ ಅವೈಜ್ಞಾನಿಕವಾಗಿದೆ. ಅದನ್ನು ಖಂಡಿಸಿ ರಾಜ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಒಕ್ಕೂಟದಿಂದ ಫೆಬ್ರುವರಿ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಒಕ್ಕೂಟದ ಉಪಾಧ್ಯಕ್ಷ ಯು.ಡಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವ ಮಹಿಳೆಯರ 6 ತಿಂಗಳಿನಿಂದ 3 ವರ್ಷದೊಳಗಿನ ಮಕ್ಕಳ ಲಾಲನೆ– ಪಾಲನೆ ಮಾಡುವ ಉದ್ದೇಶದಿಂದ ಕೂಸಿನಮನೆ ಅಥವಾ ಶಿಶುಪಾಲನಾ ಕೇಂದ್ರ ಸ್ಥಾಪನೆ ಉದ್ದೇಶ ಸ್ವಾಗತಾರ್ಹ. ಆದರೆ, ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಕೂಸಿನ ಮನೆ ನಿರ್ಮಿಸಿದರೆ ಯೋಜನೆ ಸದುಪಯೋಗ ಆಗುವುದಿಲ್ಲ. ಇದು ಪಂಚಾಯಿತಿಗೆ ಹೊರೆಯಾಗಲಿದೆ’ ಎಂದು ಹೇಳಿದ್ದಾರೆ.</p>.<p>‘ಪಂಚಾಯಿತಿ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ನರೇಗಾ ಯೋಜನೆ ಕಾಮಗಾರಿ ನಡೆಯುತ್ತಿರುತ್ತದೆ. ಎಲ್ಲ ಮಕ್ಕಳನ್ನೂ ಒಂದೇ ಕೂಸಿನಮನೆಯಲ್ಲಿ ತಂದು ಬಿಡುವುದು ಅಸಾಧ್ಯ. ಅಲ್ಲದೇ ವರ್ಗ– 1ರಲ್ಲಿ ಹಣವೇ ಇಲ್ಲ. ಆದಗ್ಯೂ ರಾಜ್ಯದಲ್ಲಿ 4000 ಕೂಸಿನ ಮನೆಯನ್ನು ಪ್ರಾರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ. 6 ತಿಂಗಳಿನಿಂದ 3 ವರ್ಷದೊಳಗಿನ ಮಕ್ಕಳ ಲಾಲನೆ, ಪಾಲನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ವಹಿಸುತ್ತಿದೆ. ಆ ಇಲಾಖೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಸದೃಢಗೊಳಿಸುವುದು ಸೂಕ್ತ. ಪ್ರತಿ ಗ್ರಾಮಗಳಲ್ಲೂ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಅದು ಸಹ ಕೂಸಿನ ಮನೆಯ ಕಲ್ಪನೆಯೇ ಆಗಿರುವುದರಿಂದ ಇಂತಹ ಅವೈಜ್ಞಾನಿಕ ಯೋಜನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>