ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ–2 ಕಾರಿಯಪ್ಪ ಎ.ಜಿ. ಮಾರ್ಗದರ್ಶನದಲ್ಲಿ ಸಾಗರ ಉಪವಿಭಾಗ ಪೊಲೀಸ್ ಅಧೀಕ್ಷಕ ಗೋಪಾಲಕೃಷ್ಣ ನಾಯ್ಕ ಅವರ ಮೇಲ್ವಿಚಾರಣೆಯಲ್ಲಿ, ಸಾಗರ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಮಹಾಬಲೇಶ್ವರ ಎಸ್.ಎನ್., ಪಿಎಸ್ಐ ಎ.ಆರ್. ಮುಂದಿನಮನಿ, ಸಿಬ್ಬಂದಿ ಸನಾವುಲ್ಲಾ, ಷೇಖ್ ಫೈರೋಜ್ ಅಹ್ಮದ್, ರವಿಕುಮಾರ್, ಪ್ರವೀಣ್ಕುಮಾರ್, ಗುರುಬಸವರಾಜ, ಗಿರೀಶ್ ಬಾಬು, ಗುರುರಾಜ, ಇಂದ್ರೇಶ್, ವಿಜಯ್ಕುಮಾರ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.