<p><strong>ಸಾಗರ:</strong> ‘ಆರೋಗ್ಯವಂತರು ರಕ್ತದಾನ ಮಾಡುವುದರಿಂದ ಅವರ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ’ ಎಂದು ರೋಟರಿ ರಕ್ತನಿಧಿ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಬಿ.ಜಿ.ಸಂಗಂ ಹೇಳಿದರು.</p>.<p>ಇಲ್ಲಿನ ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ರಕ್ತದಾನ ಅತ್ಯಂತ ಪವಿತ್ರವಾದ ಕಾರ್ಯವಾಗಿದೆ. ವಿದ್ಯಾರ್ಥಿ ಯುವಜನರು ರಕ್ತದಾನದ ಮಹತ್ವದ ಕುರಿತು ಸಮಾಜದಲ್ಲಿ ಅರಿವು ಮೂಡಿಸಲು ಮುಂದಾಗಬೇಕು’ ಎಂದರು.</p>.<p>ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್, ‘ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ನಮ್ಮ ಸಂಸ್ಥೆ ಮೊದಲಿನಿಂದಲೂ ಆದ್ಯತೆ ನೀಡುತ್ತಿದೆ. ಶಿಕ್ಷಣ ಎಂಬುದು ವ್ಯಾಪಾರವಲ್ಲ, ಅದೊಂದು ಸಾಮಾಜಿಕ ಬದ್ಧತೆ ಎಂದು ಹೇಳಿದರು.</p>.<p>ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಎಚ್.ಎಂ.ಶಿವಕುಮಾರ್, ಪ್ರಮುಖರಾದ ಅಂಕಿತಾ, ಶರಣ ಬಸವನಾಯ್ಕ, ಶಿಲ್ಪಾ ವಿ.ಎನ್, ಪ್ರಕಾಶ್ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ‘ಆರೋಗ್ಯವಂತರು ರಕ್ತದಾನ ಮಾಡುವುದರಿಂದ ಅವರ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ’ ಎಂದು ರೋಟರಿ ರಕ್ತನಿಧಿ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಬಿ.ಜಿ.ಸಂಗಂ ಹೇಳಿದರು.</p>.<p>ಇಲ್ಲಿನ ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ರಕ್ತದಾನ ಅತ್ಯಂತ ಪವಿತ್ರವಾದ ಕಾರ್ಯವಾಗಿದೆ. ವಿದ್ಯಾರ್ಥಿ ಯುವಜನರು ರಕ್ತದಾನದ ಮಹತ್ವದ ಕುರಿತು ಸಮಾಜದಲ್ಲಿ ಅರಿವು ಮೂಡಿಸಲು ಮುಂದಾಗಬೇಕು’ ಎಂದರು.</p>.<p>ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್, ‘ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ನಮ್ಮ ಸಂಸ್ಥೆ ಮೊದಲಿನಿಂದಲೂ ಆದ್ಯತೆ ನೀಡುತ್ತಿದೆ. ಶಿಕ್ಷಣ ಎಂಬುದು ವ್ಯಾಪಾರವಲ್ಲ, ಅದೊಂದು ಸಾಮಾಜಿಕ ಬದ್ಧತೆ ಎಂದು ಹೇಳಿದರು.</p>.<p>ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಎಚ್.ಎಂ.ಶಿವಕುಮಾರ್, ಪ್ರಮುಖರಾದ ಅಂಕಿತಾ, ಶರಣ ಬಸವನಾಯ್ಕ, ಶಿಲ್ಪಾ ವಿ.ಎನ್, ಪ್ರಕಾಶ್ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>