ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ‘ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ದುಶ್ಚಟಗಳ ಮೊರೆಹೋಗಬಾರದು. ಮಾದಕ ವ್ಯಸನಿಗಳಾದರೆ ಇಡೀ ಕುಟುಂಬ ಸಂಕಷ್ಟಕ್ಕೀಡಾಗುತ್ತದೆ. ನಿಮ್ಮ ಸುತ್ತಮುತ್ತಲೂ ಯಾವುದೇ ಮಾದಕ ವಸ್ತುಗಳು, ಗಾಂಜಾ ಮಾರಾಟ, ಸಾಗಣೆ ಕಂಡುಬಂದರೆ ತಕ್ಷಣ ಪ್ರಾಂಶುಪಾಲರಿಗೆ ಅಥವಾ ಪೊಲೀಸರಿಗೆ ದೂರು ನೀಡಬೇಕು. ದೂರು ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.