<p><strong>ಶಿವಮೊಗ್ಗ:</strong> ಕೋವಿಡ್ ಪೀಡಿತ ಬಾಲಕಿಯ ಸಂಪರ್ಕಕ್ಕೆ ಬಂದ ಕಾರಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸೇರಿದಂತೆ ಕೆಲವು ಸರ್ಕಾರಿ ಕಚೇರಿಗಳನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುದ್ದಿಗಳನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನಿರಾಕರಿಸಿದರು.</p>.<p>ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಗಳನ್ನೂಸೀಲ್ಡೌನ್ ಮಾಡಿಲ್ಲ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್ನಲ್ಲಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ 11 ಪೊಲೀಸ್ ಅಧಿಕಾರಿಗಳ ಗಂಟಲುದ್ರವದ ಪರೀಕ್ಷೆ ನಡೆಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಕರ್ತವ್ಯಕ್ಕಾಗಿ ಬೇರೆ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕ್ರಿಮಿನಾಶಕ ಸಿಂಪಡಣೆ ಮಾಡಲು ಸೂಚಿಸಲಾಗಿದೆಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p><strong>ನಿತ್ಯವೂ ಸರಾಸರಿ 70 ಜನರ ಆಗಮನ:</strong>ಪ್ರಸ್ತುತ ಜಿಲ್ಲೆಗೆ ಪ್ರತಿದಿನ 50ರಿಂದ 70ಜನರು ಹೊರ ರಾಜ್ಯಗಳಿಂದಬರುತ್ತಿದ್ದಾರೆ.ಇದುವರೆಗೆ 5,172 ಮಂದಿಯ ಗಂಟಲುದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. 4,828 ಫಲಿತಾಂಶ ಬಂದಿದೆ.320 ಜನರ ಫಲಿತಾಂಶ ಬರಬೇಕಿದೆ. 4,804 ನೆಗೆಟಿವ್ ಬಂದಿದೆ. ಹೊರ ರಾಜ್ಯಗಳಿಂದಬಂದಿರುವ1,158 ಜನರನ್ನು ಕ್ವಾರೆಂಟೈನ್ ಮಾಡಲಾಗಿದೆ. 943 ಫಲಿತಾಂಶ ಬಂದಿದೆ ಎಂದರು.</p>.<p><strong>ಒಂದೇ ದಿನ 329 ಜನರ ಪರೀಕ್ಷೆ:</strong>ಮಂಗಳವಾರ ಒಂದೇ ದಿನ ಜಿಲ್ಲೆಯಲ್ಲಿ 329 ಮಂದಿಯ ಗಂಟಲ ದ್ರವ ಸಂಗ್ರಹಿಸಿ, ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಕಂಡು ಬಂದಿದ್ದ ಪಾಸಿಟಿವ್ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರ ಗಂಟಲ ದ್ರವ ತಪಾಸಣೆ ನಡೆಸಲಾಗಿದೆ.ಮುಂದಿನ ದಿನಗಳಲ್ಲಿ ಎರಡನೇ ಹಂತದ ಸಂಪರ್ಕ ಹೊಂದಿದ್ದವರ ತಪಾಸಣೆ ನಡೆಸಲಾಗುವುದು ಎಂದರು.</p>.<p>ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ ಅನಗತ್ಯವಾಗಿ ಯಾರೂ ಮನೆಯಿಂದ ಹೊರಬರಬಾರದು. ಸಾರ್ವಜನಿಕ ಸ್ಥಳಲ್ಲಿ ಅಂತರ ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜಿಲ್ಲೆಯ ಜನರು ಜಾಗರೂಕರಾಗಿದ್ದರೆ ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲಾಡಳಿತ ಸೂಚನೆಗಳನ್ನು ಪಾಲಿಸಿದರೆ ಸಾಕು ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಕೋವಿಡ್ ಪೀಡಿತ ಬಾಲಕಿಯ ಸಂಪರ್ಕಕ್ಕೆ ಬಂದ ಕಾರಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸೇರಿದಂತೆ ಕೆಲವು ಸರ್ಕಾರಿ ಕಚೇರಿಗಳನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುದ್ದಿಗಳನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನಿರಾಕರಿಸಿದರು.</p>.<p>ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಗಳನ್ನೂಸೀಲ್ಡೌನ್ ಮಾಡಿಲ್ಲ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್ನಲ್ಲಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ 11 ಪೊಲೀಸ್ ಅಧಿಕಾರಿಗಳ ಗಂಟಲುದ್ರವದ ಪರೀಕ್ಷೆ ನಡೆಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಕರ್ತವ್ಯಕ್ಕಾಗಿ ಬೇರೆ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕ್ರಿಮಿನಾಶಕ ಸಿಂಪಡಣೆ ಮಾಡಲು ಸೂಚಿಸಲಾಗಿದೆಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p><strong>ನಿತ್ಯವೂ ಸರಾಸರಿ 70 ಜನರ ಆಗಮನ:</strong>ಪ್ರಸ್ತುತ ಜಿಲ್ಲೆಗೆ ಪ್ರತಿದಿನ 50ರಿಂದ 70ಜನರು ಹೊರ ರಾಜ್ಯಗಳಿಂದಬರುತ್ತಿದ್ದಾರೆ.ಇದುವರೆಗೆ 5,172 ಮಂದಿಯ ಗಂಟಲುದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. 4,828 ಫಲಿತಾಂಶ ಬಂದಿದೆ.320 ಜನರ ಫಲಿತಾಂಶ ಬರಬೇಕಿದೆ. 4,804 ನೆಗೆಟಿವ್ ಬಂದಿದೆ. ಹೊರ ರಾಜ್ಯಗಳಿಂದಬಂದಿರುವ1,158 ಜನರನ್ನು ಕ್ವಾರೆಂಟೈನ್ ಮಾಡಲಾಗಿದೆ. 943 ಫಲಿತಾಂಶ ಬಂದಿದೆ ಎಂದರು.</p>.<p><strong>ಒಂದೇ ದಿನ 329 ಜನರ ಪರೀಕ್ಷೆ:</strong>ಮಂಗಳವಾರ ಒಂದೇ ದಿನ ಜಿಲ್ಲೆಯಲ್ಲಿ 329 ಮಂದಿಯ ಗಂಟಲ ದ್ರವ ಸಂಗ್ರಹಿಸಿ, ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಕಂಡು ಬಂದಿದ್ದ ಪಾಸಿಟಿವ್ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರ ಗಂಟಲ ದ್ರವ ತಪಾಸಣೆ ನಡೆಸಲಾಗಿದೆ.ಮುಂದಿನ ದಿನಗಳಲ್ಲಿ ಎರಡನೇ ಹಂತದ ಸಂಪರ್ಕ ಹೊಂದಿದ್ದವರ ತಪಾಸಣೆ ನಡೆಸಲಾಗುವುದು ಎಂದರು.</p>.<p>ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ ಅನಗತ್ಯವಾಗಿ ಯಾರೂ ಮನೆಯಿಂದ ಹೊರಬರಬಾರದು. ಸಾರ್ವಜನಿಕ ಸ್ಥಳಲ್ಲಿ ಅಂತರ ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜಿಲ್ಲೆಯ ಜನರು ಜಾಗರೂಕರಾಗಿದ್ದರೆ ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲಾಡಳಿತ ಸೂಚನೆಗಳನ್ನು ಪಾಲಿಸಿದರೆ ಸಾಕು ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>