<p><strong>ತೀರ್ಥಹಳ್ಳಿ:</strong> ನಕಲಿ ಬಂಗಾರ ಕೊಟ್ಟು ವ್ಯಕ್ತಿಯೊಬ್ಬರಿಗೆ ₹20 ಲಕ್ಷ ವಂಚಿಸಿದ ಪ್ರಕರಣ ಗುರುವಾರ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.</p>.<p>ಆಂಧ್ರಪ್ರದೇಶದ ಕಡಪ ಜಿಲ್ಲೆಯ ನಿವಾಸಿ ಶ್ರೀನಿವಾಸ (54) ವಂಚನೆಗೊಳಗಾದ ವ್ಯಕ್ತಿ.</p>.<p>ಶ್ರೀನಿವಾಸ್ಗೆ ಬಳ್ಳಾರಿ ಜಿಲ್ಲೆಯಲ್ಲಿ ಒಬ್ಬ ಯುವಕ ಹಾಗೂ ಮಧ್ಯವಯಸ್ಕ ಪರಿಯಚಯವಾಗಿದ್ದರು. ತಮ್ಮೊಂದಿಗೆ ಹಳೆಯ ಕಾಲದ ಬಂಗಾರದ ನಾಣ್ಯಗಳಿದ್ದು, ಅವುಗಳನ್ನು ಮಾರಾಟ ಮಾಡಲು ನಿರ್ಧರಿಸಿದ್ದಾಗಿ ಶ್ರೀನಿವಾಸ್ಗೆ ತಿಳಿಸಿದ್ದರು. </p>.<p>‘ಎರಡು ಅಸಲಿ ಬಂಗಾರದ ನಾಣ್ಯಗಳನ್ನು ಸ್ಯಾಂಪಲ್ ಕೊಟ್ಟು ನಿಜವೆಂದು ನಂಬಿಸಿದ್ದರು. ಜ.22ರಂದು ತೀರ್ಥಹಳ್ಳಿಯ ಆಗುಂಬೆ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆತಂದ ವಂಚಕರು, 4 ಕೆ.ಜಿ.ಯಷ್ಟು ನಕಲಿ ಬಂಗಾರದ ನಾಣ್ಯಗಳನ್ನು ನೀಡಿ, ₹20 ಲಕ್ಷ ನಗದು ಪಡೆದುಕೊಂಡಿದ್ದರು. ಜೊತೆಗೆ ಅವರ ಬಳಿಯಿದ್ದ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದರು. ನಂತರ ನಾಣ್ಯಗಳನ್ನು ಪರಿಶೀಲಿಸಿದಾಗ ಅವು ನಕಲಿ ಎಂಬುದು ಗೊತ್ತಾಗಿದೆ.</p>.<p>ಮೋಸ ಹೋಗಿರುವುದನ್ನು ಅರಿತ ಶ್ರೀನಿವಾಸ್, ತೀರ್ಥಹಳ್ಳಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ:</strong> ನಕಲಿ ಬಂಗಾರ ಕೊಟ್ಟು ವ್ಯಕ್ತಿಯೊಬ್ಬರಿಗೆ ₹20 ಲಕ್ಷ ವಂಚಿಸಿದ ಪ್ರಕರಣ ಗುರುವಾರ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.</p>.<p>ಆಂಧ್ರಪ್ರದೇಶದ ಕಡಪ ಜಿಲ್ಲೆಯ ನಿವಾಸಿ ಶ್ರೀನಿವಾಸ (54) ವಂಚನೆಗೊಳಗಾದ ವ್ಯಕ್ತಿ.</p>.<p>ಶ್ರೀನಿವಾಸ್ಗೆ ಬಳ್ಳಾರಿ ಜಿಲ್ಲೆಯಲ್ಲಿ ಒಬ್ಬ ಯುವಕ ಹಾಗೂ ಮಧ್ಯವಯಸ್ಕ ಪರಿಯಚಯವಾಗಿದ್ದರು. ತಮ್ಮೊಂದಿಗೆ ಹಳೆಯ ಕಾಲದ ಬಂಗಾರದ ನಾಣ್ಯಗಳಿದ್ದು, ಅವುಗಳನ್ನು ಮಾರಾಟ ಮಾಡಲು ನಿರ್ಧರಿಸಿದ್ದಾಗಿ ಶ್ರೀನಿವಾಸ್ಗೆ ತಿಳಿಸಿದ್ದರು. </p>.<p>‘ಎರಡು ಅಸಲಿ ಬಂಗಾರದ ನಾಣ್ಯಗಳನ್ನು ಸ್ಯಾಂಪಲ್ ಕೊಟ್ಟು ನಿಜವೆಂದು ನಂಬಿಸಿದ್ದರು. ಜ.22ರಂದು ತೀರ್ಥಹಳ್ಳಿಯ ಆಗುಂಬೆ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆತಂದ ವಂಚಕರು, 4 ಕೆ.ಜಿ.ಯಷ್ಟು ನಕಲಿ ಬಂಗಾರದ ನಾಣ್ಯಗಳನ್ನು ನೀಡಿ, ₹20 ಲಕ್ಷ ನಗದು ಪಡೆದುಕೊಂಡಿದ್ದರು. ಜೊತೆಗೆ ಅವರ ಬಳಿಯಿದ್ದ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದರು. ನಂತರ ನಾಣ್ಯಗಳನ್ನು ಪರಿಶೀಲಿಸಿದಾಗ ಅವು ನಕಲಿ ಎಂಬುದು ಗೊತ್ತಾಗಿದೆ.</p>.<p>ಮೋಸ ಹೋಗಿರುವುದನ್ನು ಅರಿತ ಶ್ರೀನಿವಾಸ್, ತೀರ್ಥಹಳ್ಳಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>