<p><strong>ತೀರ್ಥಹಳ್ಳಿ:</strong> ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ (MIO) ತೀರ್ಥಹಳ್ಳಿ ಕೇಂದ್ರದಲ್ಲಿ 81 ವರ್ಷದ ವೃದ್ಧೆಯೊಬ್ಬರ ಅಂಡಾಶಯದಲ್ಲಿದ್ದ 40 ಸೆಂ.ಮೀ ಗಾತ್ರದ ಸುಮಾರು 6 ಕೆ.ಜಿ ತೂಕದ ಭಾರಿ ಅಂಡಾಶಯ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯಲಾಗಿದೆ.</p>.<p>ಹೃದಯ ಸಂಬಂಧಿತ ಸಮಸ್ಯೆ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಈ ವೃದ್ಧೆ ಹೆಚ್ಚಿನ ಅಪಾಯದ ರೋಗಿಯಾಗಿದ್ದರೂ, ಸಮಗ್ರ ವೈದ್ಯಕೀಯ ತಯಾರಿ ಮತ್ತು ತಜ್ಞರ ತಂಡದ ಸಮನ್ವಯದಿಂದ ಸಂಕೀರ್ಣ ಸ್ಟೇಜಿಂಗ್ ಲ್ಯಾಪರೋಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು.</p>.<p>ಮುಖ್ಯ ಶಸ್ತ್ರಚಿಕಿತ್ಸಕ ಡಾ.ಸುರೇಶ್ ಕ್ಲೆಮೆಂಟ್ ಡಿಸೋಜಾ ಅವರ ನೇತೃತ್ವದಲ್ಲಿ ಡಾ.ದಿವ್ಯಜ್ಯೋತಿ ಅವರೊಂದಿಗೆ ಈ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಲಾಗಿದ್ದು, ರೋಗಿಯ ಕುಟುಂಬಕ್ಕೆ ಯಾವುದೇ ಆರ್ಥಿಕ ಭಾರವಾಗಿಲ್ಲ. ಶಸ್ತ್ರಚಿಕಿತ್ಸೆಯ ನಂತರ ರೋಗಿ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<div><blockquote>ಈ ದೊಡ್ಡ ಶಸ್ತ್ರಚಿಕಿತ್ಸೆ ತೀರ್ಥಹಳ್ಳಿಯಂತಹ ಪಟ್ಟಣಗಳಲ್ಲಿಯೂ ಉನ್ನತ ಮಟ್ಟದ ಪ್ರೋಟೋಕಾಲ್ ಆಧಾರಿತ ಕ್ಯಾನ್ಸರ್ ಚಿಕಿತ್ಸೆ ನೀಡಲು ಸಾಧ್ಯವೆಂಬುದನ್ನು ಸಾಬೀತುಪಡಿಸಿದೆ. ದೊಡ್ಡನಗರ ಮಟ್ಟದ ಚಿಕಿತ್ಸೆ ಈಗ ಪಟ್ಟಣ ಭಾಗಕ್ಕೂ ತಲುಪುತ್ತಿದೆ</blockquote><span class="attribution">ಡಾ. ಸುರೇಶ್ ರಾವ್ ತೀರ್ಥಹಳ್ಳಿಯ ಆಂಕಾಲಜಿ ತಂಡದ ಮುಖ್ಯಸ್ಥ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ:</strong> ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ (MIO) ತೀರ್ಥಹಳ್ಳಿ ಕೇಂದ್ರದಲ್ಲಿ 81 ವರ್ಷದ ವೃದ್ಧೆಯೊಬ್ಬರ ಅಂಡಾಶಯದಲ್ಲಿದ್ದ 40 ಸೆಂ.ಮೀ ಗಾತ್ರದ ಸುಮಾರು 6 ಕೆ.ಜಿ ತೂಕದ ಭಾರಿ ಅಂಡಾಶಯ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯಲಾಗಿದೆ.</p>.<p>ಹೃದಯ ಸಂಬಂಧಿತ ಸಮಸ್ಯೆ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಈ ವೃದ್ಧೆ ಹೆಚ್ಚಿನ ಅಪಾಯದ ರೋಗಿಯಾಗಿದ್ದರೂ, ಸಮಗ್ರ ವೈದ್ಯಕೀಯ ತಯಾರಿ ಮತ್ತು ತಜ್ಞರ ತಂಡದ ಸಮನ್ವಯದಿಂದ ಸಂಕೀರ್ಣ ಸ್ಟೇಜಿಂಗ್ ಲ್ಯಾಪರೋಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು.</p>.<p>ಮುಖ್ಯ ಶಸ್ತ್ರಚಿಕಿತ್ಸಕ ಡಾ.ಸುರೇಶ್ ಕ್ಲೆಮೆಂಟ್ ಡಿಸೋಜಾ ಅವರ ನೇತೃತ್ವದಲ್ಲಿ ಡಾ.ದಿವ್ಯಜ್ಯೋತಿ ಅವರೊಂದಿಗೆ ಈ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಲಾಗಿದ್ದು, ರೋಗಿಯ ಕುಟುಂಬಕ್ಕೆ ಯಾವುದೇ ಆರ್ಥಿಕ ಭಾರವಾಗಿಲ್ಲ. ಶಸ್ತ್ರಚಿಕಿತ್ಸೆಯ ನಂತರ ರೋಗಿ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<div><blockquote>ಈ ದೊಡ್ಡ ಶಸ್ತ್ರಚಿಕಿತ್ಸೆ ತೀರ್ಥಹಳ್ಳಿಯಂತಹ ಪಟ್ಟಣಗಳಲ್ಲಿಯೂ ಉನ್ನತ ಮಟ್ಟದ ಪ್ರೋಟೋಕಾಲ್ ಆಧಾರಿತ ಕ್ಯಾನ್ಸರ್ ಚಿಕಿತ್ಸೆ ನೀಡಲು ಸಾಧ್ಯವೆಂಬುದನ್ನು ಸಾಬೀತುಪಡಿಸಿದೆ. ದೊಡ್ಡನಗರ ಮಟ್ಟದ ಚಿಕಿತ್ಸೆ ಈಗ ಪಟ್ಟಣ ಭಾಗಕ್ಕೂ ತಲುಪುತ್ತಿದೆ</blockquote><span class="attribution">ಡಾ. ಸುರೇಶ್ ರಾವ್ ತೀರ್ಥಹಳ್ಳಿಯ ಆಂಕಾಲಜಿ ತಂಡದ ಮುಖ್ಯಸ್ಥ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>