<p><strong>ತೀರ್ಥಹಳ್ಳಿ</strong>: ದೇಶದ ಜ್ಞಾನದ ಹಣತೆ ಹಚ್ಚುವಲ್ಲಿ ಪ್ರಾಥಮಿಕ ಶಾಲೆಯ ಪಾತ್ರ ಪ್ರಧಾನವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.</p>.<p>ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಶಾಲೆಗಿದೆ. ಊರು ಬಲಿಷ್ಠವಾಗಿದ್ದರೆ ರಾಷ್ಟ್ರ ಶಕ್ತಿಯುತವಾಗಿ ಬೆಳೆಯುತ್ತದೆ ಎಂದರು.</p>.<p>‘ಪಕ್ಷ ರಾಜಕಾರಣ ಬಿಟ್ಟು ಚಿಂತಿಸುವ ಪ್ರೌಢಿಮೆ ವ್ಯಕ್ತಿಗಳಲ್ಲಿ ಬೆಳೆಯಬೇಕು. ಒಳ್ಳೆಯ ಮನಸ್ಸಿನಿಂದ ಚಿಂತಿಸಿದರೆ ಏನು ಬೇಕಾದರು ಸಾಧಿಸಬಹುದು ಎಂದು ಅಬ್ದುಲ್ ಕಲಾಂ ದೇಶಕ್ಕೆ ತೋರಿಸಿಕೊಟ್ಟಿದ್ದಾರೆ. ಅಂತಹವರ ಜೀವನ ಸಂದೇಶಗಳನ್ನು ವಿದ್ಯಾರ್ಥಿಗಳು ಸರಿಯಾಗಿ ಮನನ ಮಾಡಿಕೊಳ್ಳಬೇಕು ಎಂದರು.</p>.<p>ನೂರು ವರ್ಷಗಳ ಹಿಂದೆ ಕುಡುಮಲ್ಲಿಗೆಯ ಸಣ್ಣ ಗ್ರಾಮದಲ್ಲಿ ಶಾಲೆ ಕಟ್ಟಿದ ಮಹನೀಯರ ಶ್ರಮ ಮತ್ತು ದೂರದೃಷ್ಟಿಯ ಕಲ್ಪನೆ ಪೀಳಿಗೆಯ ಭವಿಷ್ಯವನ್ನು ನಿರ್ಮಾಣ ಮಾಡಿದೆ. ಇಲ್ಲಿ ಓದಿದ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು ಊರಿಗೆ ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು.</p>.<p>ನಿವೃತ್ತ ದೈಹಿಕ ಶಿಕ್ಷಕ ಬಿ.ಕೆ.ಮಂಜಪ್ಪ ರಂಗಮಂದಿರವನ್ನು, ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಶೆಟ್ಟಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.</p>.<p>ಎಸ್.ಡಿ.ಎಂ.ಸಿ ಅಧ್ಯಕ್ಷ ಎಚ್.ಎಂ.ಸತೀಶ್, ಗ್ರಾ.ಪಂ. ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಸಂದೀಪ, ವಿನಂತಿ, ಸುಮಂಗಲ, ಇಂದಿರಾ, ಪದ್ಮ, ಬಿಇಓ ವೈ.ಗಣೇಶ್, ಪ್ರೌಢಶಾಲೆ ಮುಖ್ಯ ಶಿಕ್ಷಕರ ಮಾರುತೇಶ್, ಯಶಸ್ವಿನಿ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ</strong>: ದೇಶದ ಜ್ಞಾನದ ಹಣತೆ ಹಚ್ಚುವಲ್ಲಿ ಪ್ರಾಥಮಿಕ ಶಾಲೆಯ ಪಾತ್ರ ಪ್ರಧಾನವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.</p>.<p>ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಶಾಲೆಗಿದೆ. ಊರು ಬಲಿಷ್ಠವಾಗಿದ್ದರೆ ರಾಷ್ಟ್ರ ಶಕ್ತಿಯುತವಾಗಿ ಬೆಳೆಯುತ್ತದೆ ಎಂದರು.</p>.<p>‘ಪಕ್ಷ ರಾಜಕಾರಣ ಬಿಟ್ಟು ಚಿಂತಿಸುವ ಪ್ರೌಢಿಮೆ ವ್ಯಕ್ತಿಗಳಲ್ಲಿ ಬೆಳೆಯಬೇಕು. ಒಳ್ಳೆಯ ಮನಸ್ಸಿನಿಂದ ಚಿಂತಿಸಿದರೆ ಏನು ಬೇಕಾದರು ಸಾಧಿಸಬಹುದು ಎಂದು ಅಬ್ದುಲ್ ಕಲಾಂ ದೇಶಕ್ಕೆ ತೋರಿಸಿಕೊಟ್ಟಿದ್ದಾರೆ. ಅಂತಹವರ ಜೀವನ ಸಂದೇಶಗಳನ್ನು ವಿದ್ಯಾರ್ಥಿಗಳು ಸರಿಯಾಗಿ ಮನನ ಮಾಡಿಕೊಳ್ಳಬೇಕು ಎಂದರು.</p>.<p>ನೂರು ವರ್ಷಗಳ ಹಿಂದೆ ಕುಡುಮಲ್ಲಿಗೆಯ ಸಣ್ಣ ಗ್ರಾಮದಲ್ಲಿ ಶಾಲೆ ಕಟ್ಟಿದ ಮಹನೀಯರ ಶ್ರಮ ಮತ್ತು ದೂರದೃಷ್ಟಿಯ ಕಲ್ಪನೆ ಪೀಳಿಗೆಯ ಭವಿಷ್ಯವನ್ನು ನಿರ್ಮಾಣ ಮಾಡಿದೆ. ಇಲ್ಲಿ ಓದಿದ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು ಊರಿಗೆ ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು.</p>.<p>ನಿವೃತ್ತ ದೈಹಿಕ ಶಿಕ್ಷಕ ಬಿ.ಕೆ.ಮಂಜಪ್ಪ ರಂಗಮಂದಿರವನ್ನು, ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಶೆಟ್ಟಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.</p>.<p>ಎಸ್.ಡಿ.ಎಂ.ಸಿ ಅಧ್ಯಕ್ಷ ಎಚ್.ಎಂ.ಸತೀಶ್, ಗ್ರಾ.ಪಂ. ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಸಂದೀಪ, ವಿನಂತಿ, ಸುಮಂಗಲ, ಇಂದಿರಾ, ಪದ್ಮ, ಬಿಇಓ ವೈ.ಗಣೇಶ್, ಪ್ರೌಢಶಾಲೆ ಮುಖ್ಯ ಶಿಕ್ಷಕರ ಮಾರುತೇಶ್, ಯಶಸ್ವಿನಿ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>