ನಗರದಲ್ಲಿ ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ಹಲವು ಸಮಾಜಗಳು ಮೀಸಲಾತಿ ಬೇಡಿಕೆ ಇಟ್ಟಿವೆ. ಮೀಸಲಾತಿ ಪಡೆಯಲು ಅರ್ಹತೆ ಇರುವ ಸಮಾಜಕ್ಕೆ ಖಂಡಿತ ಸೌಲಭ್ಯ ದೊರಕುತ್ತದೆ. ಶೋಷಿತ ಸಮುದಾಯಗಳ ಪರವಾಗಿ ಸ್ವಾಮೀಜಿಗಳು ನೇತೃತ್ವ ವಹಿಸಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಗಡುವಿನ ಒಳಗೆ ಮೀಸಲಾತಿ ನೀಡಬೇಕೆಂಬ ಬೆದರಿಕೆ ಸರಿಯಲ್ಲ. ಒತ್ತಾಯ ಮಾಡಿದ ತಕ್ಷಣ ಮೀಸಲಾತಿ ಕೊಡಲೂ ಸಾಧ್ಯವಿಲ್ಲ. ಹಿಂದುಳಿದ ವರ್ಗದ ಆಯೋಗ ಸಮಿತಿ ಶಿಫಾರಸು ಆಧರಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಪ್ರತಿಕ್ರಿಯಿಸಿದರು.