ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಎಚ್1ಎನ್1 ಪ್ರಕರಣ ಪತ್ತೆಯಾಗಿವೆ. ಶಿವಮೊಗ್ಗ ಹಾಗೂ ಭದ್ರಾವತಿಯ ತಲಾ ಒಬ್ಬರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.
ಕೆಮ್ಮು, ಶೀತ, ನೆಗಡಿಯ ಕಾರಣಕ್ಕೆ ಚಿಕಿತ್ಸೆಗೆ ಬಂದಿದ್ದವರಲ್ಲಿ ಪರೀಕ್ಷೆ ನಡೆಸಿದಾಗ ಎಚ್1ಎನ್1 ಸೋಂಕು ಪತ್ತೆಯಾಗಿದೆ. ಎಲ್ಲರೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜೀವಕ್ಕೆ ಅಪಾಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಸ್ಪಷ್ಟಪಡಿಸಿದ್ದಾರೆ.
ಸೋಂಕು ಕಾಣಿಸಿ ಕೊಂಡರೂ ಈಗ ಟ್ಯಾಮಿಫ್ಲೂ ಮಾತ್ರೆ ಸೇವಿಸಿದರೆ 24 ಗಂಟೆಗಳಲ್ಲಿ ನಿಯಂತ್ರಣಕ್ಕೆ ಬರುತ್ತದೆ. 10 ವರ್ಷಗಳ ಹಿಂದೆ ಇದ್ದ ಭಯದ ಪರಿಸ್ಥಿತಿ ಈಗ ಇಲ್ಲ. ಔಷಧಿ ಯೂ ಲಭ್ಯವಿದೆ ಎಂದರು.