ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ: ಕಾಲೇಜಿಗೆ ಹೊರಟಿದ್ದ ಮೂವರು ವಿದ್ಯಾರ್ಥಿನಿಯರಿಗೆ ಟಿಪ್ಪರ್ ಡಿಕ್ಕಿ

ಒಬ್ಬರ ಸ್ಥಿತಿ ಗಂಭೀರ
Last Updated 28 ಡಿಸೆಂಬರ್ 2022, 6:29 IST
ಅಕ್ಷರ ಗಾತ್ರ

ಶಿವಮೊಗ್ಗ: ಸಾಗರ ಪಟ್ಟಣದ ಸಣ್ಣಮನೆ ಸೇತುವೆ ಬಳಿ ಬುಧವಾರ ಬೆಳಿಗ್ಗೆ ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಜೆಲ್ಲಿಕಲ್ಲು ತುಂಬಿಕೊಂಡು ಹೊರಟಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ.

ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಓದುವ ಈ ವಿದ್ಯಾರ್ಥಿಗಳು ಸಮೀಪದ ಬಿಸಿಎಂ ಹಾಸ್ಟೆಲ್ ನಿಂದ ಕಾಲೇಜಿಗೆ ಹೊರಟಿದ್ದರು.

ಅಪಘಾತದಲ್ಲಿ ಅಂಕಿತಾ, ಈಶ್ವರಿ ಹಾಗೂ ಪ್ರತಿಭಾ ಗಾಯಗೊಂಡಿದ್ದು, ಅವರಲ್ಲಿ ಪ್ರತಿಭಾ ಸ್ಥಿತಿ ಗಂಭೀರವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೋಗದ ಕಡೆಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.

ಗಾಯಗೊಂಡವರಲ್ಲಿ ಇಬ್ಬರು ಶಿಕಾರಿಪುರದವರು. ಒಬ್ಬ ವಿದ್ಯಾರ್ಥಿನಿ ಸೊರಬದವರು.

ಸಾಗರದ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತ ನಡೆದ ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿ ಟಿಪ್ಪರ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT