ತೀರ್ಥಹಳ್ಳಿ: ಪಟ್ಟಣದ ಬಾಳೇಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಣಕ ವಿಜ್ಞಾನ ವಿಭಾಗದ ಅತಿಥಿ ಉಪನ್ಯಾಸಕ ಶ್ರೀಹರ್ಷ ಶಾನುಭೋಗ್ (40) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಸನಗರ ತಾಲ್ಲೂಕು ಯಡೂರು ಸಮೀಪದ ಹೆಬ್ಬಳಬೈಲು ಗ್ರಾಮದವರು. ಉಡುಪಿ ಜಿಲ್ಲೆಯ ಕುಂಜಿಬೆಟ್ಟುವಿ ನಲ್ಲಿ ವಾಸವಾಗಿದ್ದ ಅವರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಮೃತರಿಗೆ ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ಅತಿಥಿ ಉಪನ್ಯಾಸಕರಿಗೆ ನೀಡುವ ₹ 11 ಸಾವಿರ ಸಂಬಳದಲ್ಲಿ ಜೀವನ ನಿರ್ವಹಣೆ ಸಾಧ್ಯವಾಗದೆ ತೀರ್ವ ಖಿನ್ನತೆಗೀಡಾಗಿದ್ದರು. ಪ್ರತಿನಿತ್ಯ ಉಡುಪಿಯಿಂದ ತೀರ್ಥಹಳ್ಳಿಗೆ ಬಂದು ಉಪನ್ಯಾಸ ನೀಡುತ್ತಿದ್ದರು. ಪತ್ನಿಯೂ ಮಂಗಳೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಉಡುಪಿಯಲ್ಲಿ ದಂಪತಿ ವಾಸವವಾಗಿದ್ದರು. ಸಂಬಳದ ವಿಚಾರವಾಗಿ ಕೌಟುಂಬಿಕ ಕಲಹ ಎಂದು ಸಹೋದ್ಯೋಗಿಗಳು, ಸ್ನೇಹಿತರೊಂದಿಗೆ ಕಷ್ಟ ಹೇಳಿಕೊಂಡಿದ್ದರು.