<p><strong>ಸಾಗರ:</strong> ದಮನಿತರ, ಶೋಷಿತರ ಪರವಾಗಿ ಸದಾ ಧ್ವನಿ ಎತ್ತುತ್ತಿದ್ದ ಮಾರುತಿ ಮಾನ್ಪಡೆ ದಣಿವರಿಯದ ಹೋರಾಟಗಾರರಾಗಿದ್ದರು ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಶಾಖೆ ಅಧ್ಯಕ್ಷ ನಾಗೇಶ್ ಕೆ.ವಾಲೆ ಹೇಳಿದರು.</p>.<p>ಮಾರುತಿ ಮಾನ್ಪಡೆ ಅವರಿಗೆ ಶನಿವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.</p>.<p>ಪಂಚಾಯಿತಿ ನೌಕರರ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾನ್ಪಡೆಯವರು ಸಲ್ಲಿಸಿರುವ ಸೇವೆ ಅನನ್ಯ. ನೌಕರರ ಸಂಘಟನೆ ಹಾಗೂ ಸರ್ಕಾರದ ನಡುವೆ ಅವರು ಕೊಂಡಿಯಾಗಿದ್ದರು ಎಂದರು.</p>.<p>ವೈಯಕ್ತಿಕ ಬದುಕಿನಲ್ಲಿ ಅತ್ಯಂತ ಸರಳವಾಗಿದ್ದ ಮಾನ್ಪಡೆ ಯಾವುದೇ ಕ್ಷೇತ್ರದಲ್ಲಿ ದುಡಿಯುವ ವರ್ಗದವರಿಗೆ ಅನ್ಯಾಯವಾದರೆ ಅದನ್ನು ಸಹಿಸುತ್ತಿರಲಿಲ್ಲ. ಜನಪರವಾದ ಹೋರಾಟ ಎಲ್ಲೇ ನಡೆಯುತ್ತಿದ್ದರೂ ಅದಕ್ಕೆ ತಮ್ಮ ಬೆಂಬಲ ಸೂಚಿಸುವ ಔದಾರ್ಯ ಹೊಂದಿದ್ದರು ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಎಂ.ಕಮ್ಮಾರ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಮುಖರಾದ ನಾಗರಾಜ್, ಮಂಜಪ್ಪ, ಶ್ರೀಧರ್, ಗುತ್ಯಪ್ಪ, ಷಣ್ಮುಖ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ದಮನಿತರ, ಶೋಷಿತರ ಪರವಾಗಿ ಸದಾ ಧ್ವನಿ ಎತ್ತುತ್ತಿದ್ದ ಮಾರುತಿ ಮಾನ್ಪಡೆ ದಣಿವರಿಯದ ಹೋರಾಟಗಾರರಾಗಿದ್ದರು ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಶಾಖೆ ಅಧ್ಯಕ್ಷ ನಾಗೇಶ್ ಕೆ.ವಾಲೆ ಹೇಳಿದರು.</p>.<p>ಮಾರುತಿ ಮಾನ್ಪಡೆ ಅವರಿಗೆ ಶನಿವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.</p>.<p>ಪಂಚಾಯಿತಿ ನೌಕರರ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾನ್ಪಡೆಯವರು ಸಲ್ಲಿಸಿರುವ ಸೇವೆ ಅನನ್ಯ. ನೌಕರರ ಸಂಘಟನೆ ಹಾಗೂ ಸರ್ಕಾರದ ನಡುವೆ ಅವರು ಕೊಂಡಿಯಾಗಿದ್ದರು ಎಂದರು.</p>.<p>ವೈಯಕ್ತಿಕ ಬದುಕಿನಲ್ಲಿ ಅತ್ಯಂತ ಸರಳವಾಗಿದ್ದ ಮಾನ್ಪಡೆ ಯಾವುದೇ ಕ್ಷೇತ್ರದಲ್ಲಿ ದುಡಿಯುವ ವರ್ಗದವರಿಗೆ ಅನ್ಯಾಯವಾದರೆ ಅದನ್ನು ಸಹಿಸುತ್ತಿರಲಿಲ್ಲ. ಜನಪರವಾದ ಹೋರಾಟ ಎಲ್ಲೇ ನಡೆಯುತ್ತಿದ್ದರೂ ಅದಕ್ಕೆ ತಮ್ಮ ಬೆಂಬಲ ಸೂಚಿಸುವ ಔದಾರ್ಯ ಹೊಂದಿದ್ದರು ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಎಂ.ಕಮ್ಮಾರ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಮುಖರಾದ ನಾಗರಾಜ್, ಮಂಜಪ್ಪ, ಶ್ರೀಧರ್, ಗುತ್ಯಪ್ಪ, ಷಣ್ಮುಖ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>