<p>ತೀರ್ಥಹಳ್ಳಿ: ಗುರುವಾರ ತಡರಾತ್ರಿ ಸುರಿದ ಆಲಿಕಲ್ಲು ಮಳೆ ಹಾಗೂ ಜೋರಾಗಿ ಬೀಸಿದ ಗಾಳಿಯಿಂದಾಗಿ ಸಮೀಪದ ಬೆಜ್ಜವಳ್ಳಿ, ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಬಡಿ, ಕೂಡಿಗೆ ಗ್ರಾಮಗಳ ರೈತರ ತೋಟಗಳಲ್ಲಿನ 100ಕ್ಕೂ ಹೆಚ್ಚು ಅಡಿಕೆ ಮರಗಳು ಉರುಳಿ ಬಿದ್ದಿವೆ.</p>.<p>ಬೆಜ್ಜವಳ್ಳಿ ವಿದ್ಯುತ್ ಪೂರೈಕೆ ಉಪಕೇಂದ್ರ ಮಾರ್ಗದ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿದ್ದು, ಅವು ತುಂಡಾಗಿವೆ. ಕನ್ನಂಗಿ ಸೇರಿದಂತೆ ಹಲವು ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.</p>.<p>ಗಾಳಿಯ ರಭಸಕ್ಕೆ ಅರಣ್ಯ ಪ್ರದೇಶದಲ್ಲಿ ಮರಗಳ ರೆಂಬೆಗಳು ಮುರಿದು ಬಿದ್ದಿವೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯ ವಿವಿಧ ಮಾರ್ಗಗಳು ತರಗೆಲೆಗಳಿಂದ ಮುಚ್ಚಿಹೋಗಿದ್ದು ಕಂಡು ಬಂತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-42-776809896</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೀರ್ಥಹಳ್ಳಿ: ಗುರುವಾರ ತಡರಾತ್ರಿ ಸುರಿದ ಆಲಿಕಲ್ಲು ಮಳೆ ಹಾಗೂ ಜೋರಾಗಿ ಬೀಸಿದ ಗಾಳಿಯಿಂದಾಗಿ ಸಮೀಪದ ಬೆಜ್ಜವಳ್ಳಿ, ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಬಡಿ, ಕೂಡಿಗೆ ಗ್ರಾಮಗಳ ರೈತರ ತೋಟಗಳಲ್ಲಿನ 100ಕ್ಕೂ ಹೆಚ್ಚು ಅಡಿಕೆ ಮರಗಳು ಉರುಳಿ ಬಿದ್ದಿವೆ.</p>.<p>ಬೆಜ್ಜವಳ್ಳಿ ವಿದ್ಯುತ್ ಪೂರೈಕೆ ಉಪಕೇಂದ್ರ ಮಾರ್ಗದ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿದ್ದು, ಅವು ತುಂಡಾಗಿವೆ. ಕನ್ನಂಗಿ ಸೇರಿದಂತೆ ಹಲವು ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.</p>.<p>ಗಾಳಿಯ ರಭಸಕ್ಕೆ ಅರಣ್ಯ ಪ್ರದೇಶದಲ್ಲಿ ಮರಗಳ ರೆಂಬೆಗಳು ಮುರಿದು ಬಿದ್ದಿವೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯ ವಿವಿಧ ಮಾರ್ಗಗಳು ತರಗೆಲೆಗಳಿಂದ ಮುಚ್ಚಿಹೋಗಿದ್ದು ಕಂಡು ಬಂತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-42-776809896</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>