<p><strong>ತೀರ್ಥಹಳ್ಳಿ:</strong> ಸ್ತನ ಕ್ಯಾನ್ಸರ್ ಕುರಿತ ‘ಜೋಪಾನ ಸಖೀ ಜೋಪಾನ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಅ.26ರ ಸಂಜೆ 4ಕ್ಕೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೃತಿಯ ಲೇಖಕಿ ಎಂ.ಜಿ.ಗಾಯತ್ರಿ ಶೇಷಗಿರಿ ತಿಳಿಸಿದರು.</p>.<p>ಸ್ತನದ ಕುರಿತು ಮಹಿಳೆಯರಲ್ಲಿ ಸಂವೇದನಾತ್ಮಕ ಭಾವನೆಗಳಿವೆ. ಅದರಲ್ಲೂ ಕ್ಯಾನ್ಸರ್ ಪೀಡಿತರು ಭಯಪಡುವ ಸ್ಥಿತಿ ಇರುತ್ತದೆ. ಅವರು ತಮ್ಮ ನೋವುಗಳನ್ನು ಇತರರೊಂದಿಗೆ ಹಂಚಿಕೊಳ್ಳಲಾಗದಷ್ಟು ವೇದನೆ ಅನುಭವಿಸುತ್ತಾರೆ. ಅಂತಹ ವಿಶೇಷ ಕಥೆಗಳು ಕೃತಿಯಲ್ಲಿ ಅಡಕವಾಗಿವೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಭಾರತದಲ್ಲಿ ಸ್ತನ ಕ್ಯಾನ್ಸರ್ ವ್ಯಾಪಕವಾಗಿ ಹರಡುತ್ತಿರುವ ಕಾಯಿಲೆಯಾಗಿದೆ. ವೈದ್ಯಕೀಯ ತಂತ್ರಜ್ಞಾನ ಮುಂದುವರೆದಿದ್ದು, ಆಯ್ದ ಭಾಗಗಳಿಗೆ ಮಾತ್ರ ಚಿಕಿತ್ಸೆ ನೀಡಬಹುದು. ರೋಗಿಗಳು, ರಾಜ್ಯದ ವಿವಿಧ ತಜ್ಞ ವೈದ್ಯರನ್ನು ಸಂಪರ್ಕಿಸಿ ಅವರ ಅನುಭವ, ಚಿಕಿತ್ಸೆಯ ಬಗೆಗೆ ಪುಸ್ತಕದಲ್ಲಿ ಮಾಹಿತಿ ನೀಡಲಾಗಿದೆ ಎಂದರು.</p>.<p>ಕ್ಯಾನ್ಸರ್ ಬರುವುದಕ್ಕಿಂತ ಮುಂಚಿತವಾಗಿ ತಡೆಗಟ್ಟುವ ಕ್ರಮಗಳನ್ನು ಅನುಸರಿಸುವುದು ಉತ್ತಮ. ಜಾಗೃತಿಗೆ ಪುಸ್ತಕ ಕೈಪಿಡಿಯಾಗಲಿದೆ. ಯಾವುದೇ ರೀತಿಯ ಮಡಿವಂತಿಕೆ ಇಲ್ಲದೆ ಮುಕ್ತವಾಗಿ ಮಾಹಿತಿ ಹಂಚಿಕೊಂಡಿದ್ದೇನೆ ಎಂದು ಹೇಳಿದರು.</p>.<p>ಸಾಹಿತ್ಯ ಆಸಕ್ತ ಬಳಗದ ಕಡಿದಾಳು ದಯಾನಂದ, ನೈಜಲಾ ರತ್ನಾಕರ, ಮೋಹನ್ ಮುನ್ನೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ:</strong> ಸ್ತನ ಕ್ಯಾನ್ಸರ್ ಕುರಿತ ‘ಜೋಪಾನ ಸಖೀ ಜೋಪಾನ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಅ.26ರ ಸಂಜೆ 4ಕ್ಕೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೃತಿಯ ಲೇಖಕಿ ಎಂ.ಜಿ.ಗಾಯತ್ರಿ ಶೇಷಗಿರಿ ತಿಳಿಸಿದರು.</p>.<p>ಸ್ತನದ ಕುರಿತು ಮಹಿಳೆಯರಲ್ಲಿ ಸಂವೇದನಾತ್ಮಕ ಭಾವನೆಗಳಿವೆ. ಅದರಲ್ಲೂ ಕ್ಯಾನ್ಸರ್ ಪೀಡಿತರು ಭಯಪಡುವ ಸ್ಥಿತಿ ಇರುತ್ತದೆ. ಅವರು ತಮ್ಮ ನೋವುಗಳನ್ನು ಇತರರೊಂದಿಗೆ ಹಂಚಿಕೊಳ್ಳಲಾಗದಷ್ಟು ವೇದನೆ ಅನುಭವಿಸುತ್ತಾರೆ. ಅಂತಹ ವಿಶೇಷ ಕಥೆಗಳು ಕೃತಿಯಲ್ಲಿ ಅಡಕವಾಗಿವೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಭಾರತದಲ್ಲಿ ಸ್ತನ ಕ್ಯಾನ್ಸರ್ ವ್ಯಾಪಕವಾಗಿ ಹರಡುತ್ತಿರುವ ಕಾಯಿಲೆಯಾಗಿದೆ. ವೈದ್ಯಕೀಯ ತಂತ್ರಜ್ಞಾನ ಮುಂದುವರೆದಿದ್ದು, ಆಯ್ದ ಭಾಗಗಳಿಗೆ ಮಾತ್ರ ಚಿಕಿತ್ಸೆ ನೀಡಬಹುದು. ರೋಗಿಗಳು, ರಾಜ್ಯದ ವಿವಿಧ ತಜ್ಞ ವೈದ್ಯರನ್ನು ಸಂಪರ್ಕಿಸಿ ಅವರ ಅನುಭವ, ಚಿಕಿತ್ಸೆಯ ಬಗೆಗೆ ಪುಸ್ತಕದಲ್ಲಿ ಮಾಹಿತಿ ನೀಡಲಾಗಿದೆ ಎಂದರು.</p>.<p>ಕ್ಯಾನ್ಸರ್ ಬರುವುದಕ್ಕಿಂತ ಮುಂಚಿತವಾಗಿ ತಡೆಗಟ್ಟುವ ಕ್ರಮಗಳನ್ನು ಅನುಸರಿಸುವುದು ಉತ್ತಮ. ಜಾಗೃತಿಗೆ ಪುಸ್ತಕ ಕೈಪಿಡಿಯಾಗಲಿದೆ. ಯಾವುದೇ ರೀತಿಯ ಮಡಿವಂತಿಕೆ ಇಲ್ಲದೆ ಮುಕ್ತವಾಗಿ ಮಾಹಿತಿ ಹಂಚಿಕೊಂಡಿದ್ದೇನೆ ಎಂದು ಹೇಳಿದರು.</p>.<p>ಸಾಹಿತ್ಯ ಆಸಕ್ತ ಬಳಗದ ಕಡಿದಾಳು ದಯಾನಂದ, ನೈಜಲಾ ರತ್ನಾಕರ, ಮೋಹನ್ ಮುನ್ನೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>