<p><strong>ಶಿವಮೊಗ್ಗ:</strong> ಸ್ವಚ್ಛ ಭಾರತ್ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕಾಗಿ ನೀಡುವ ಸಹಾಯಧನವನ್ನು ₹ 20 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಇಲ್ಲಿನ ಪ್ರೇರಣಾ ಸಭಾಂಗಣದಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒಗಳಿಗೆ ಶನಿವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯನ್ನು ಬಯಲು ಶೌಚಮುಕ್ತವನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಪರಿಶಿಷ್ಟ ಜಾತಿ, ಪಂಗಡದವರು ಶೌಚಾಲಯ ನಿರ್ಮಿಸಿಕೊಂಡರೆ ಅವರಿಗೆ ಈಗ ಸರ್ಕಾರದಿಂದ ಹೆಚ್ಚಿನ ಸಹಾಯಧನ ಸಿಗುತ್ತದೆ. ಇದನ್ನು ಸದುಪಯೋಗ ಮಾಡಿಕೊಳ್ಳಬೇಕು<br />ಎಂದು ತಿಳಿಸಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಿ ಸ್ಥಳೀಯರಿಗೆ ಉದ್ಯೋಗವನ್ನು ನೀಡುವ ಜವಾಬ್ದಾರಿ ಆಯಾ ಗ್ರಾಮ ಪಂಚಾಯಿತಿಗಳದ್ದು. ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆಯಾ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕುಳಿತು ಚರ್ಚಿಸಿ ಅಂತಿಮಗೊಳಿಸಬೇಕು ಎಂದು ಸಲಹೆ ನೀಡಿದರು.</p>.<p class="Subhead">ಆದ್ಯತೆ ಮೇರೆಗೆ ಕೆರೆ–ಕಟ್ಟೆ ಅಭಿವೃದ್ಧಿ: ಕೆರೆ–ಕಟ್ಟೆಗಳ ಅಭಿವೃದ್ಧಿ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಗುರುತಿಸಿ ಅವುಗಳನ್ನು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಘಟಕಗಳನ್ನು ನಿರ್ಮಿಸಲಾಗುತ್ತಿದೆ.<br />ಕಸ ವಿಲೇವಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಗ್ರಾಮ ಪಂಚಾಯಿತಿಗಳ ಜವಾಬ್ದಾರಿ<br />ಎಂದರು.</p>.<p class="Subhead">ಖಾತ್ರಿ ಯೋಜನೆಯಡಿ ₹ 2,256 ಕೋಟಿ ಬಿಡುಗಡೆ: ಕೇಂದ್ರ ಸರ್ಕಾರ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿ ಮೂಲಸೌಲಭ್ಯಗಳನ್ನು ಕಲ್ಪಿಸಲು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ ₹ 2,256 ಕೋಟಿ ಬಿಡುಗಡೆ ಮಾಡಲಾಗಿದೆ. ಈ ರೀತಿಯ ಕಾರ್ಯಾಗಾರಗಳ ಮೂಲಕ ಯೋಜನೆಗಳ ಸಮರ್ಪಕ ಅನುಷ್ಠಾನ ಸಾಧ್ಯವಾಗಲಿದೆ ಎಂದ ಸಂಸದ ಬಿ.ವೈ.ರಾಘವೇಂದ್ರ<br />ತಿಳಿಸಿದರು.</p>.<p>ಶಾಸಕ ಎಚ್. ಹಾಲಪ್ಪ ಹರತಾಳು, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಆರ್.ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ‘ಸೂಡಾ’ ಅಧ್ಯಕ್ಷ ಜ್ಯೋತಿ ಪ್ರಕಾಶ್, ‘ಕಾಡಾ’ ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಸ್ವಚ್ಛ ಭಾರತ್ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕಾಗಿ ನೀಡುವ ಸಹಾಯಧನವನ್ನು ₹ 20 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಇಲ್ಲಿನ ಪ್ರೇರಣಾ ಸಭಾಂಗಣದಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒಗಳಿಗೆ ಶನಿವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯನ್ನು ಬಯಲು ಶೌಚಮುಕ್ತವನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಪರಿಶಿಷ್ಟ ಜಾತಿ, ಪಂಗಡದವರು ಶೌಚಾಲಯ ನಿರ್ಮಿಸಿಕೊಂಡರೆ ಅವರಿಗೆ ಈಗ ಸರ್ಕಾರದಿಂದ ಹೆಚ್ಚಿನ ಸಹಾಯಧನ ಸಿಗುತ್ತದೆ. ಇದನ್ನು ಸದುಪಯೋಗ ಮಾಡಿಕೊಳ್ಳಬೇಕು<br />ಎಂದು ತಿಳಿಸಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಿ ಸ್ಥಳೀಯರಿಗೆ ಉದ್ಯೋಗವನ್ನು ನೀಡುವ ಜವಾಬ್ದಾರಿ ಆಯಾ ಗ್ರಾಮ ಪಂಚಾಯಿತಿಗಳದ್ದು. ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆಯಾ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕುಳಿತು ಚರ್ಚಿಸಿ ಅಂತಿಮಗೊಳಿಸಬೇಕು ಎಂದು ಸಲಹೆ ನೀಡಿದರು.</p>.<p class="Subhead">ಆದ್ಯತೆ ಮೇರೆಗೆ ಕೆರೆ–ಕಟ್ಟೆ ಅಭಿವೃದ್ಧಿ: ಕೆರೆ–ಕಟ್ಟೆಗಳ ಅಭಿವೃದ್ಧಿ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಗುರುತಿಸಿ ಅವುಗಳನ್ನು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಘಟಕಗಳನ್ನು ನಿರ್ಮಿಸಲಾಗುತ್ತಿದೆ.<br />ಕಸ ವಿಲೇವಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಗ್ರಾಮ ಪಂಚಾಯಿತಿಗಳ ಜವಾಬ್ದಾರಿ<br />ಎಂದರು.</p>.<p class="Subhead">ಖಾತ್ರಿ ಯೋಜನೆಯಡಿ ₹ 2,256 ಕೋಟಿ ಬಿಡುಗಡೆ: ಕೇಂದ್ರ ಸರ್ಕಾರ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿ ಮೂಲಸೌಲಭ್ಯಗಳನ್ನು ಕಲ್ಪಿಸಲು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ ₹ 2,256 ಕೋಟಿ ಬಿಡುಗಡೆ ಮಾಡಲಾಗಿದೆ. ಈ ರೀತಿಯ ಕಾರ್ಯಾಗಾರಗಳ ಮೂಲಕ ಯೋಜನೆಗಳ ಸಮರ್ಪಕ ಅನುಷ್ಠಾನ ಸಾಧ್ಯವಾಗಲಿದೆ ಎಂದ ಸಂಸದ ಬಿ.ವೈ.ರಾಘವೇಂದ್ರ<br />ತಿಳಿಸಿದರು.</p>.<p>ಶಾಸಕ ಎಚ್. ಹಾಲಪ್ಪ ಹರತಾಳು, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಆರ್.ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ‘ಸೂಡಾ’ ಅಧ್ಯಕ್ಷ ಜ್ಯೋತಿ ಪ್ರಕಾಶ್, ‘ಕಾಡಾ’ ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>