ಜೋಗ, ಆಗುಂಬೆ, ಸಕ್ರೇಬೈಲು, ಗಾಜನೂರು, ಭದ್ರಾ ಜಲಾಶಯ, ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ, ಅರಣ್ಯ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳಿಗೆ ವಾರಾಂತ್ಯದಲ್ಲಿ ಅಧಿಕ ಪ್ರವಾಸಿಗರು ಭೇಟಿ ನೀಡಲು ಆರಂಭಿಸಿದ್ದರು. ಕೋವಿಡ್ ನಿಯಮಗಳನ್ನು ಪಾಲಿಸದೆ ಭಾರಿ ಸಂಖ್ಯೆಯ ಜನರು ಒಂದೆಡೆ ಸೇರುವುದನ್ನು ನಿಯಂತ್ರಿಸಲು ಕಠಿಣ ನಿಯಮಗಳು ಅನಿವಾರ್ಯ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.